ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ

ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ

Latest Activity

Nagaraj was featured
2 hours ago
Nagaraj is now a member of ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
11 hours ago
apoorva is now a member of ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
on Monday
November 15
Naveen Gowda and Ravikiran P are now friends
November 15
Hi Jagadish where is this place(falls)?
November 14
November 11
MSD is now a member of ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 10
Jayaprakash Narayan MK ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 10
November 10
November 9
Naveen Gowda and vinay joined ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 9
kiran masth and ranjitha joined ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 6
kruthi b s is now a member of ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 5
Kiran Kumar V and suresh.k joined ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 3
November 2

Members

  • Nagaraj
  • Appu
  • Sunil Kumar.G.N
  • Manjunatha Srinivas
  • CHETHAN SANJEEV
  • Lokesh Rajarathnam
  • Spoorthi
  • giridhar naidu
  • GIRISH BABU
  • Sreevathsava K V
  • Naveen Kumar C  R
  • Anil Kumar
  • Rajsekar
  • Prema Gowda
  • Manjunatha
  • Shivananda

RSS

ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು

"ನನ್ನ ಜೀವನವೇ ನನ್ನ ಸಂದೇಶ" ಎಂದು ಮಹಾತ್ಮಾ ಗಾಂಧಿ ಹೇಳಿದ್ದು ಯಾವಗ ಅನ್ನುವುದನ್ನು ನಾವೆಲ್ಲರೂ ಮರೆತಿದ್ದರೂ ಅದನ್ನು ಆಗಾಗ ಪ್ರಯೋಗಿಸುವುದನ್ನು ಮಾತ್ರ ಮರೆಯುವುದಿಲ್ಲ. ಆದರೆ ಮಹಾತ್ಮ ಕೊಟ್ಟ ಸಂದೇಶವೇನು ಅದನ್ನು ನಾವು ಅರ್ಥೈಸುವುದು ಹೇಗೆ ಅನ್ನುವುದು ಮಾತ್ರ ಗಹನ ಚರ್ಚೆಯ ವಿಷಯವಾಗಬಹುದು. ಮಾಹಾತ್ಮ ಗಾಂಧಿಯನ್ನು ಓದಿಕೊಂಡಿದ್ದರೂ ಆತನ ಬಗ್ಗೆ ಪಾಂಡಿತ್ಯವಿಲ್ಲದ, ಯಾವ ಗಾಂಧೀವಾದದ ವಿಚರವನ್ನೂ ಪಾಲಿಸದ ನಾನು ಈ ವಿಷಯದಲ್ಲಿ ಹಠಾತ್ ಆಸಕ್ತಿ ಪಡೆಯುವುದಕ್ಕೆ ಕಾರಣವಿದೆ. ಈಚೆಗೆ ಪತ್ರಿಕೆಗಳಲ್ಲಿ ಮತ್ತು ನಗರದ ಹಲವೆಡೆ ಪೋಸ್ಟರುಗಳಲ್ಲಿ ಕಂಡ ಮಾ ಬ್ಲಾ [Mont Blanc] ಪೆನ್ನಿನ ಜಾಹೀರಾತನ್ನು ಕಂಡಾಗ ಈ ಪ್ರಶ್ನೆ ಸಹಜವಾಗಿ ನನ್ನಲ್ಲಿ ಉದ್ಭವವಾಯಿತು.





ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.




ಭೂಗತ ಜಗತ್ತಿನ ಒಳನೋಟಗಳು

ಸುಧೀರ್ ವೆಂಕಟೇಶ್ ಅವರ ಗ್ಯಾಂಗ್ ಲೀಡರ್ ಫರ್ ಎ ಡೇ ಒಂದು ಕುತೂಹಲಕಾರಿ ಪುಸ್ತಕ. ನಿಜಕ್ಕೂ ಈ ಪುಸ್ತಕ ಗಂಭೀರ ಬರವಣಿಗೆ ಮತ್ತು ಜನಪ್ರಿಯ ಬರವಣಿಗೆಯ ಮಧ್ಯೆ ತೂರಾಡುತ್ತಾ, ಕಡೆಗೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿ ಅವುಗಳನ್ನು ಉತ್ತರಿಸಲು ಪ್ರಯತ್ನಿಸದೆಯೇ ನಿಂತುಬಿಡುತ್ತದೆ. ಹೀಗೆ ಎಲ್ಲಕ್ಕೂ ಉತ್ತರವನ್ನು ನೀಡುವುದು ಸುಧೀರ್ ಅವರ ಉದ್ದೇಶವೂ ಅಲ್ಲ, ಅದು ಸಾಧ್ಯವೂ ಆಗುವುದಿಲ್ಲ ಎನ್ನುವ ಭಾವನೆ ನಮಗೆ ಬರುವುದರಲ್ಲಿ ಯಾವ ಸೋಜಿಗವೂ ಇಲ್ಲ. ಆದರೂ ಈ ಪುಸ್ತಕವನ್ನು ನಾವು ಓದಿ ಚರ್ಚಿಸಬೇಕಾದ ಅವಶ್ಯಕತೆಯಿದೆ.





ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!




RSS

ಮಹಾತಾಯಿಗೆ ನಮನ..

  ಸಾವಿರ ಪೆಟ್ಟು ಕೊಟ್ಟರು ನಾ ಬೀಳುವುದಿಲ್ಲವೆನುತ ಕೋಟಿ ಕೋಟಿ ಜನರ ಪೊರೆಯುತ್ತಿರುವ ಮುಂಬೈ ಎಂಬ ಮಹಾ ತಾಯಿಗೆ, ಏನೇ ಆಗಲಿ ಹೀಗೆ ಇರುವೆವು ಎಂದು ಮೊಗದಲ್ಲಿ ತುಂಬು ನಗೆಯ ಸೂಸುವ ಮುಂಬೈ ಮಹಾ ಜನತೆಗೆ ಕಣ್ತುಂಬಿ ನಮಿಸುತ್ತಾ ಅಗಲಿದ ಬಂಧುಗಳಿಗೆ ನಮ್ಮ ನಮನಗಳನ್ನು ಸಲಿಸೋಣ… ಆರಿ ಹೋದವು ನೂರು ದೀವಿಗೆಗಳು ಕೋಟಿ ಕಂಗಳ ಬೆಳಕ ಕಾಯಲು ಕರಗಿ ಹೋದವು ಸಾವಿರ ಆಸೆಗಳು ಕೋಟಿ ಭಾವಗಳ ಒಂದು ಮಾಡಲು ಕೋಟಿ ಪ್ರಣಾಮಗಳು ಆ ಬೆಳಕ ಕಾಯ್ದ ಉಕ್ಕು ಕೈಗಳಿಗೆ ಅನಂತ ನಮನಗಳು ಆ ಬೆಳಕಿಗುಸಿರು ಹೊಯ್ದ ಅಮರ ಜೀವಗಳಿಗೆ ಧಿಕ್ಕಾರವಿರಲಿ ನಡೆದಾಡುವ ಪಿಶಾಚಗಳು ಮಾನವರಾದುದಕ್ಕೆ ಧಿಕ್ಕಾರವಿರಲಿ ಅವ ಪೊರೆದು ತಾ ಬದುಕುವ ರಕ್ತ ಪಿಪಾಸುಗಳಿಗೆ ಇನ್ನಾದರೂ ಮೇಲೇಳುವ ಈ [...]

ಇಲ್ಲ ಬಿಡು…

ನಿನ್ನ ನಗೆ ನೆನಪು, ನಿನ್ನ ಕೈ ಬಿಸುಪು, ಕಳೆದ ಕವಿತೆ ಸಾಲು, ಬರೆದ ಸವಿ ಸಮಯ, ಜತೆ ನಡೆದ ಸಾಗರ ತೀರ, ಸುಳಿವ ಹುಣ್ಣಿಮೆ ಗಾಳಿ, ಈ ಎಲ್ಲದಕೂ ನನ್ನೆರಡು ಕಣ್ಣ ಹನಿ ಕಾಣಿಕೆಯೇ…?? ಇಲ್ಲ ಬಿಡು… ನನ್ನ ಪ್ರೀತಿ… ನಿನ್ನ ನೆನಪು ಅಷ್ಟು ಬಡವಲ್ಲ ಬಿಡು….  —-

ನಿನ್ನ ನೆನಪು…

ನಿನ್ನ ನೆನಪು… ಚಿಗುರು ಮಾವನ್ನರಸಿ ಹೊರಡುವ ಕೋಗಿಲೆಯ ಇಂಪು, ಬಿರು ಬೇಸಿಗೆಯಲ್ಲಿ ಅರ್ಧ ಸುರಿದ ಮಳೆ, ಒಟ್ಟಿನಲ್ಲಿ ನನ್ನ ಮನದ ನೆಮ್ಮದಿ ಕೆಡಿಸಿದ ಸುಂದರ ಕನಸು…   ಪುಟ್ಟಾ……… ಯಾಕೋ ತುಂಬಾ ಬೇಸರವಾಗ್ತಿದೆ ಕಣೆ. ಮಳೆಗಾಗಿ ಕಾದ ನೆಲ, ಮಳೆ ಬರದೆ ಇದ್ದಾಗ ಬಿಡುವ ನಿಟ್ಟುಸಿರನಷ್ಟು ತಾಪ ಒಳಗೆ ಸುಡ್ತಾ ಇದೆ. ಹೀಗೆ ಇದ್ದಕ್ಕಿದ್ದ ಹಾಗೆ ಕಾಡೋ ಖಿನ್ನತೆ ಜೊತೆಗೆ ನಿನ್ನ ನೆನಪೂ ಸೇರಿಬಿಟ್ರೆ, ಥೂ… ಇದೂ ಒಂದು ಬದುಕಾ….?? ಅನ್ಸಿಬಿಡುತ್ತೆ ಕಣೆ. ಆ ಬೇಗೆ ಯಾರ್ಗೂ ಬೇಡ ಕಣೆ. ನಿನ್ನ ನೆನಪೋ, ಅದೂ ಹೊತ್ತಲ್ಲದ ಹೊತ್ತಲ್ಲಿ ಬರುತ್ತೆ. ಕಡಲಿಗಾದ್ರೂ ತೀರ ಮೀರದ [...]

ಹುಡುಗೀ….

ಹುಡುಗಿ… ನೀನು ಕವಿಯ ಮನಸು, ನಾ ಬರೆದಿಟ್ಟ ಕನಸು, ಮುಚ್ಚಿಟ್ಟ ಕವಿತೆ, ಚಿಮ್ಮುವ ಭಾವದ ಒರತೆ, ಯಾರೋ ಬರೆದು ಹಾಡಲು ಮರೆತ ಪ್ರೇಮ ಗೀತೆ…. …… ಗಣೆಶ…

ನೀನು…

ನೆನಪಾಗಿ ಕಾಡಿದವಳು, ಕಳೆದಿರುಳ ಕನಸೊಳಗೆ.. ಕಾಡಿದೆ ನಿನ್ನ ನೆರಳು, ನನ್ನ ಬಾಳ ಪಥದೊಳಗೆ.. ಕಣ್ಣೊಳಗೆ ಕೂತ ಕನಸಿಗೆ, ನೂರು ಬಣ್ಣ ಕೊಟ್ಟವಳು.. ಮನದೊಳಗೆ ಅವಿತ ಪದಕೆ ಕವಿತೆ ಹೆಸರ ಇಟ್ಟವಳು.. ಬರಿದಾದ ಎದೆ ಕಾಗದದಿ, ಒಲುಮೆ ಹಾಡ ಬರೆದವಳು.. ಮೌನದ ನೀರವತೆಗೆ, ಸಂಗೀತ ಕಲಿಸಿದವಳು.. ನಗುತ ನೀ ನಿಂತಾಗ ತೊಲಗಿತು ಆ ಕಾರಿರುಳು.. ನೀನಿಲ್ಲದೆ ನರಳಿದೆ ನೋಡು, ಹುಣ್ಣಿಮೆ ಚಂದಿರನಿರುಳು.. ಎದೆ ನೋವ ಮರೆಸುವ ನೆವದಿ, ಮಧುರವಾಗಿ ಕೊಲುವವಳು.. ಜತನವಾಗಿಟ್ಟ ಕನಸ, ಕೇಳಿ ನಗೆಯಾಡುವವಳು.. ಇನ್ನೇನು ಬಣ್ಣಿಸಲಿ ನೀ ಹೇಳು…?? — ಗಣೇಶ…
 

Photos

Loading…

Blog Posts

Jayaprakash Narayan  MK

TREKKING & ROCK CLIMBING IN CHIKBALLAPUR

Trekking, mountaineeering, and rock climbing are the best things to do in Chickballapur.

There are five hills, locally known as Pancha Giris (literally five hills), about 15 km south of Chikballapur, including the tourist destination known as Nandi Hill. The five hills are known locally as Nandi Giri, Chandra Giri, Indra Giri, Brahma Giri, and Hema Giri. Also, there is a sixth hill known locally as Kalavaara Hill or Skanda Giri.

The Nandi Hill, along the face known as Tippu's Dro… Continue

Posted by Jayaprakash Narayan MK on September 16, 2009 at 9:58pm

Jayaprakash Narayan  MK

PLACES OF INTEREST IN CHIKKABALLAPURA DISTRICT

Chintamani
Chintamani is names after its founder Chintamani Rao, a Maratha chieftain who had camped in this place long ago. Chintamani is also well-known for Agarbatti (incense) manufacturing and export.

The other attraction of Chintamani is the temple at Kailasagiri. This is a famous cave temple located on the hill. There are three shrines in Kailasagiri dedicated to Lord Shiva, Goddess Parvathi and Lord Ganesha.

The Murugmulla Dargah of Fakhi Shah Wali (one of the oldest dargahs in Ka… Continue

Posted by Jayaprakash Narayan MK on September 16, 2009 at 9:38pm

CHIKKABALLAPURA

Sir Mokshagundam Vishweshwaraiah

Sir Mokshagundam Vishweshwaraiah




Mokshagundam Vishweshwaraiah, popularly and affectionately known as Sir M.V., was born on September 15, 1861 in a village known as Muddenahalli in Chikballapur ,(Old Kolar District). Sir M.V. belongs to that small band of eminent Indians whose ideas and achievements hav… Continue

Posted by CHIKKABALLAPURA on September 15, 2009 at 7:23pm

CHIKKABALLAPURA

About Chikkaballapura

Chikkaballapur: Chikkaballapura district is a newly created district of Karnataka in 2007. Few attractions of district are Chintamani, Kaivara, Amaranarayana temple, Minkanagurki, Nandi Hills or Nandidurg, Rangasthala and Vidurashwatha.



CHIKBALLAPUR or CHIKBALAPUR

Chikballapur or Chikbalapur or Chikkaballapura is the District Headquarters of Chikballapur in Karnataka and about 57 km north of Bangalore. The north-south National Highway NH-7 goes through the town, functions as the Main Street… Continue

Posted by CHIKKABALLAPURA on June 13, 2009 at 10:00pm

RSS

ekaviNadeduBandaDaari

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI    ಈಕವಿ ನೆಡೆದು ಬಂದ ಹಾದಿ ಆತ್ಮೀಯ ಕನ್ನಡಿಗರೆ, ಕರ್ನಾಟಕ ಮತ್ತು ಕನ್ನಡದ ಇಂದಿನ ದುಃಸ್ಥಿತಿಯ ಅರಿವು ತಮಗೆ ಇದ್ದೇ ಇದೆ. ಅನ್ಯ ರಾಜ್ಯಗಳ ಜನಗಳು ವಲಸೆ ಬಂದು ಇಲ್ಲಿ ತಮ್ಮದೇ ಭಾಷೆ [...]

PRESS RELEASE of ekavi of Inaguration October 4th 2003

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ  ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI   For your information: Press Release FOR IMMEDIATE RELEASE IRVINE, CALIFORNIA, USA – Kannadigas are extremely happy and proud that celebrated famous author and dramatist, Former [...]

EKAVI is a Total Kannada Organization

EKAVI is a Total Kannada Organization   EKAVI NETWORK  of KANNADIGAS all over the world ಎಲ್ಲಾದರು ಇರು ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ…   Make your friends to join EKAVI for KANNADA cause. Become a Committee person to handle issues. Take your friends to the EKAVI meeting. EKAVI is an International Kannada Vedike [...]

ekavi Meeting and Directions

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI     ಈಕವಿ ಸಭೆ, ಬೆಂಗಳೂರು ನಲ್ಲಿ , ರವಿವಾರ , ಅಕ್ಟೋಬರ್ ೪ ೨೦೦೯ , ೪ ಗಂಟೆಗೆ ಇದೆ.   ಸಭೆ ನಡೆಯುವ ವಿಳಾಸ: 12, ಸುಮೇರು, ಸರ್ ಎಂ. ಏನ್. ಕೃಷ್ಣರಾವ್ ರಸ್ತೆ. ಬಸವನಗುಡಿ, ಬೆಂಗಳೂರು 560004. __________________   EKAVI [...]

NIMMA JILLEGE ekavi jothe serikondu SAHAYA maadi

ಈಕವಿ ಸಂಸ್ಥೆ ಯು ಇದುವರೆಗೂ ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ೨೦೦೩ ರರಿಂದ ಇಂದಿನವರೆಗೂ ಕನ್ನಡಕ್ಕಾಗಿ ಸೇವೆ , ಕನ್ನಡಿಗರಿಗೆ ಸಹಾಯ, ಮಾಡುತ್ತಾ ಬಂದಿದೆ. ಆದ್ದರಿಂದ ಆಸಕ್ತಿ ಇರುವ ವಿದ್ಯಾವಂತ ಯುವಕ ಯುವತಿಯರಿಗೆ ತಮ್ಮ  ತಮ್ಮ ಜಿಲ್ಲೆ, ತಾಲ್ಲೂಕು, ಹಳ್ಳಿ, ಹೋಬಳಿಗಳಿಗೆ ಏನಾದರು ಸೇವೆ ಸಲ್ಲಿಸುವ ಆಸಕ್ತಿ ಇರುವವರನ್ನು ಪ್ರೋತ್ಸಾಹಿಸಲು ಈ-ಕವಿ ವೇದಿಕೆಯು ಸಜ್ಜಿಸಲಾಗಿದೆ.   ಬೆಂಗಳೂರಿನಲ್ಲಿ, ಹೊರರಾಜ್ಯದಲ್ಲಿ ಮತ್ತು ಹೊರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ತಮ್ಮ ತಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿಗಳ ಬಗ್ಗೆ ಚಿಂತಿಸಿ, ತನ್ನನ್ನು ಬೆಳೆಸಿದ ಊರಿಗೆ ಸಹಾ [...]

RSS

"ಸಹಿ"ಗನ್ನಡದಿಂದ ಗ್ರಾಹಕ ಸೇವೆಯಲ್ಲಿ ಕನ್ನಡ!

*****



ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸದಿಂದ, ಬ್ಯಾಂಕೊಂದರಲ್ಲಿ (ಕರ್ನಾಟಕದಲ್ಲಿ!) ವ್ಯವಹರಿಸುವಾಗ ಅನುಭವಿಸಿದ ಕಿರಿಕಿರಿಯ ಅನುಭವವನ್ನು "ಕನ್ನಡ, ಕನ್ನಡ ಹಾ ಸಹಿಗನ್ನಡ" ಲೇಖನದ ಮೂಲಕ ('ಹಾಯಿದೋಣಿ' ಅಂಕಣ, ಸಾಪ್ತಾಹಿಕ ಪುರವಣಿ, ಪ್ರಜಾವಾಣಿ, ೧ನೇ ನವಂಬರ್ ೨೦೦೯) ಶ್ರೀಯುತ ಲಕ್ಷ್ಮಣ ಕೊಡಸೆಯವರು ಕನ್ನಡಿಗರ ಹಕ್ಕಾಗಬೇಕಾಗಿರುವ "ಕನ್ನಡದಲ್ಲಿ ಗ್ರಾಹಕ ಸೇವೆ"ಯ ಬಗ್ಗೆ ಕನ್ನಡಿಗರು ತೋರಿರುವ ನಿರ್ಲಕ್ಷ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬ ಘೋಷಣೆಗೆ ಆಕರ್ಷಣೆಗೊಳ್ಳುವುದು, ಕನ್ನಡ ಭಾಷೆಯನ್ನುಳಿಸಲು ಸರ್ಕಾರವೇ ಕ್ರಮ ತೆಗೆದುಕೊಳ್ಳಬೇಕೆಂದುಕೊಳ್ಳುವುದು, ಇತರ ಭಾಷಿಕರಿಗೆ ಹೋಲಿಸಿಕೊಂಡು ನಾವು ನಿರಭಿಮಾನಿಗಳೆಂದುಕೊಳ್ಳುವ ಈ ಯಾವುದು ನಮ್ಮ ಕನ್ನಡ ಭಾಷೆಯ ಉನ್ನತಿಗೆ ಪರಿಹಾರವಲ್ಲ. ಕನ್ನಡಕ್ಕೆ ಶಕ್ತಿ ತುಂಬುವ ಕೆಲಸದಲ್ಲಿ ನಮ್ಮ-ನಿಮ್ಮಂತ ಶ್ರೀ ಸಾಮಾನ್ಯನ ಪಾತ್ರ ಬಹಳ ಹಿರಿದಾದದ್ದು ಎಂಬ ಮಾತುಗಳನ್ನು ಕೊಡಸೆಯವರು ಈ ಮೂಲಕ ತಿಳಿಹೇಳಿದ್ದಾರೆ.

ಸಹಿ ಎಂಬುದು ವ್ಯಕ್ತಿಯೊಬ್ಬನ ವೈಯುಕ್ತಿಕ ಸಂಕೇತ, ತನ್ನ ಅಭಿ ವ್ಯಕ್ತಿಯ ಲಾಂಛನ ಎಂಬುದು ನೂರಕ್ಕೆ ನೂರು ಸತ್ಯ. ಅಂತೆಯೇ ಭಾಷಾವಾರು ಪ್ರಾಂತ್ಯಗಳ ಒಕ್ಕೂಟವಾಗಿ ಹೊರ ಹೊಮ್ಮಿರುವ ಭಾರತದ, ಕರ್ನಾಟಕ ಪ್ರಾಂತ್ಯದ ಭಾಷೆ ಕನ್ನಡ ಎಂಬುದು ಸಹ ಅಷ್ಟೆ ಸತ್ಯವಾದದ್ದು. ಕರ್ನಾಟಕದಲ್ಲಿ ಕನ್ನಡದ ಬಳಕೆಗೆ, ಕನ್ನಡಿಗರ ಅಭಿವೃದ್ಧಿಗೆ ಸಂವಿಧಾನ ನಮಗೆ ಸವಲತ್ತು ಒದಗಿಸಿದೆ. ಇದರಂತೆ ಕರ್ನಾಟಕದಲ್ಲಿನ ಎಲ್ಲಾ ವ್ಯವಹಾರಸ್ಥರು ಕನ್ನಡ ಅರಿತವರಾಗಿ ತಮ್ಮ ಎಲ್ಲಾ ವ್ಯವಹಾರದಲ್ಲಿ ಕನ್ನಡವನ್ನು ಅಳವಡಿಸಿಕೊಳ್ಳಬೇಕಾಗಿರುವುದು ಅವರ ಮೂಲ ಧರ್ಮವಾಗಬೇಕಾದದ್ದು ಸಹಜವಾದದ್ದು. ಮುಖ್ಯವಾಗಿ ನಾವು ಎಲ್ಲರೊಡನೆ ಕನ್ನಡದಲ್ಲಿ ವ್ಯವಹರಿಸುವಂತಾದರೆ ಮಾತ್ರ ನಮ್ಮ ಹಕ್ಕಿಗೂ ಬೆಲೆ ಬರುತ್ತದಲ್ಲವೆ? ಇಲ್ಲಿ ನಾವು ಗಮನಿಸಬೇಕಾಗಿರುವುದು, ನಮ್ಮ ದಿನ ನಿತ್ಯದ ವ್ಯವಹಾರಗಳಲ್ಲಿ ಕನ್ನಡದಲ್ಲೇ ವ್ಯವಹರಿಸುವುದರಿಂದ ಸಣ್ಣ ರೀತಿಯಲ್ಲಿ ನಾವು ಒಂದು ಆಂದೋಲವನ್ನೇ ಹುಟ್ಟು ಹಾಕಬಹುದಾಗಿದೆ.

ಹೌದು ಕರ್ನಾಟಕದಲ್ಲಿ, 'ಕನ್ನಡದಲ್ಲಿ ಗ್ರಾಹಕ ಸೇವೆ' ಕುರಿತಾಗಿ ನಾನು ಇಲ್ಲಿ ಹೇಳ್ತಾ ಇದೀನಿ. ಬ್ಯಾಂಕಿನಲ್ಲಿ ಕನ್ನಡ ಇಲ್ಲ ಅಂದ್ರೆ, ಅವರು ಕನ್ನಡದಲ್ಲಿ ಸೇವೆ ಕೊಡ್ದೆ ಇರೋದು ಒಂದು ಕಾರಣವಾದರೆ, ನಾವು ಕನ್ನಡ ಉಪಯೋಗಿಸದೆ ಇರೋದು ಇನ್ನೊಂದು ಕಾರಣ. ಅದಕ್ಕಗಿ ನಾವು ಹೀಗೆ ಮಾಡಬಹುದಲ್ಲವೇ.

೧] ಕೇವಲ ಸಹಿ ಮಾತ್ರವಲ್ಲ! ಇನ್ನು ಮುಂದೆ ನಾವು ನಮ್ಮ ಬ್ಯಾಂಕು ಚೆಕ್ಕುಗಳನ್ನು ಕನ್ನಡದಲ್ಲೇ ಬರೆಯೋಣ
೨] ಬ್ಯಾಂಕಿನ ಎಟಿಎಂ ಉಪಯೋಗಿಸುವಾಗ ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳೋಣ
೩] ಬ್ಯಾಂಕಿನೊಡನೆ ಯಾವುದೇ ವ್ಯವಹಾರವಿರಲಿ ಪತ್ರ ವ್ಯವಹಾರ ಕನ್ನಡದಲ್ಲೇ ಮಾಡೋಣ
೪] ಬ್ಯಾಂಕಿನ ಕರೆ ಕೇಂದ್ರಗಳಿಂದ ಕರೆ ಬಂದಾಗ ಅಥವ ನಾವು ಅವರಿಗೆ ಕರೆ ಮಾಡಿದಾಗ ಕನ್ನಡದಲ್ಲಿ ಮಾತನಾಡಲು ಆಗ್ರಹಿಸೋಣ
೫] ಬ್ಯಾಂಕಿನಲ್ಲಿ ಖಾತೆ ತೆರೆಯುವಾಗ, ಬ್ಯಾಂಕಿಗೆ ಹಣ ತುಂಬುವಾಗ, ಹಣ ತೆಗೆಯುವಾಗ ಕನ್ನಡದ ಅರ್ಜಿ ನಮೂನೆಗಳಿಗೆ ಆಗ್ರಹಿಸೋಣ. ಅವರು ಕೊಡುವ ನಮೂನೆಗಳಲ್ಲಿ ಕನ್ನಡದಲ್ಲೇ ಎಲ್ಲ ವಿವರಗಳನ್ನು ನಮೂದಿಸೋಣ.
ಇದು ಬ್ಯಾಂಕಿನವರಿಗೆ ಕನ್ನಡದ ಅನಿವಾರ್ಯತೆಯನ್ನು ಹುಟ್ಟು ಹಾಕುತ್ತದೆ. ಕನ್ನಡಿಗರಿಗೆ ಕೆಲಸ ದೊರೆಯುತ್ತದೆ. ಕನ್ನಡ ಬರದ ಕೆಲಸಗಾರರು ಕನ್ನಡ ಕಲಿಯಬೇಕಾದ ಅನಿವಾರ್ಯತೆಯನ್ನು ಉಂಟು ಮಾಡುತ್ತದೆ.

ಇದು ಕೇವಲ ಬ್ಯಾಂಕ್ ಗೆ ಮಾತ್ರ ಸೀಮಿತವಲ್ಲ. ನಾವು ಗ್ರಾಹಕ ಸೇವೆ ಪಡೆಯೋ ಎಲ್ಲೆಡೆ (ರೈಲು, ಬಸ್ಸು ಟಿಕೆಟ್ಟು ಖರೀದಿಸುವಾಗ, ವಿಮಾ ಕಂಪನಿಗಳೊಡನೆ ವ್ಯವಹರಿಸುವಾಗ, ಮೊಬೈಲ್ ಕಂಪನಿಗಳ ಕರೆ ಕೇಂದ್ರದವರೊಡನೆ ಮಾತನಾಡುವಾಗ, ಅಂಗಡಿ-ಮುಂಗಟ್ಟು-ಮಾಲ್ ಗಳಲ್ಲಿ ವ್ಯವಹರಿಸುವಾಗ) ಕನ್ನಡವನ್ನು ಈ ರೀತಿ ನಾವು ಉಪಯೋಗಿಸುವ ಹಕ್ಕು ನಮಗಿದೆ.


ಇದು ಅಭಿಮಾನ ಮತ್ತು ನಮ್ಮ ಅಂತಂಗದ ಧ್ವನಿಯಾಗಿ ಹೊರಹೊಮ್ಮುವಂತಾಗಬೇಕು ಎಂಬುದು ಕೊಡಸೆಯವರ ಅಭಿಲಾಷೆ.

ಎಲ್ಲರಿಗೂ "ಕರ್ನಾಟಕ ರಾಜ್ಯೋತ್ಸವ" ಶುಭಾಶಯಗಳು.

ಚಂದ್ರಶೇಖರನ್ ಕಲ್ಯಾಣ ರಾಮನ್
ಹಳದಿ-ಕೆಂಪಿನ ಚಿಂತನೆ ಕಪ್ಪು ಬಿಳುಪಿನಲ್ಲಿ

*****

ಯಾರು "ಗ್ರಾಹಕ ಕೈಪಿಡಿ" ಕನ್ನಡದಲ್ಲಿ ಮಾಡಿಸಿದ್ದಾರೆ?

***

ಕೆಲ ದಿನಗಳ ಹಿಂದೆ ಬಜಾಜ್ ಸಂಸ್ಥೆಯ "ಇಸ್ತ್ರಿ ಪೆಟ್ಟಿಗೆ ಖರೀದಿಸಿದೆ". ಮನೆಗೆ ಬಂದು ಡಬ್ಬ ತೆರೆದಾಗ ಅದರಲ್ಲಿ ಕೈಪಿಡಿಯೊಂದಿತ್ತು. ತೆರೆದು ನೋಡಿದಾಗ ಬೇಜಾರಾಯ್ತು. ಮಾಹಿತಿ ಕನ್ನಡೇತರ ಭಾಷೆಯಲ್ಲಿದೆ.
ಹಾಗೆಯೆ ಕೈಪಿಡಿ ಗಮನಿಸಿದಾಗ, ಬಜಾಜ್ ಸಂಸ್ಥೆಯ ಬೆಂಗಳೂರು ಶಾಖೆಯ ಮಿಂಚೆ ವಿಳಾಸ ಕಂಡು ಬಂತು.
ಮೊನ್ನೆ ೨೬ ನೆ ತಾರೀಖು ಅವರಿಗೆ ಈ ರೀತಿ ಮಿಂಚಿಸಿದೆ.
*****
ನಾನು 18/10/2009 ರಂದು ಬೆಂಗಳೂರಿನ ಪೈ ಇಂಟರ್ ನ್ಯಾಷನಲ್ ಅಂಗಡಿಯಲ್ಲಿ ಬಜಾಜ್ಎಲೆಕ್ಟ್ರಿಕಲ್ಸ್ ತಯಾರಿಕೆಯ ಪಾಪ್ಯುಲರ್ "ಇಸ್ತ್ರಿ ಪೆಟ್ಟಿಗೆ" ಖರೀದಿಸಿದೆ. ವಿಪರ್ಯಾಸವೆಂದರೆ ಇಸ್ತ್ರಿ ಪೆಟ್ಟಿಗೆಯ ಜತೆಗೆ ವಿತರಿಸಿರುವ "ಉಪಯೋಗ ಮತ್ತುಸುರಕ್ಷತೆ" ಯ ಕೈಪಿಡಿ ಕನ್ನಡೇತರ ಭಾಷೆಯಲ್ಲಿದೆ. (ಲಗತ್ತಿಸಿರುವ ಚಿತ್ರ ನೋಡಿ)

ಬೆಂಗಳೂರು ಮತ್ತು ಕರ್ನಾಟಕ ದೇಶದ ನಾಡ ಭಾಷೆ ಕನ್ನಡ. ಇಲ್ಲಿ ನಿಮ್ಮ ಸಂಸ್ಥೆಯ ಮೂಲಕತಯಾರಿಸಿ ವಿತರಿಸುವ ಎಲ್ಲಾ ಗ್ರಾಹಕ ಉಪಯೋಗಿ ವಸ್ತುಗಳ ಬಗೆಗಿನ ಮಾಹಿತಿ, ವಿವರಣೆ,ಜಾಹೀರಾತು ಆಧ್ಯತೆಯಾಗಿ ಕನ್ನಡ ಭಾಷೆಯಲ್ಲಿರುವಂತೆ ಗಮನಿಸಬೇಕಾದ್ದು ನಿಮ್ಮ ಮೂಲಕರ್ತವ್ಯ.

ಕೂಡಲೇ ಕೆಳಗಿನ ವಿಳಾಸಕ್ಕೆ ಇಸ್ತ್ರಿ ಪೆಟ್ಟಿಗೆ "ಉಪಯೋಗ ಮತ್ತು ಸುರಕ್ಷೆ" ಕನ್ನಡಕೈಪಿಡಿ ಕಳುಹಿಸಿಕೊಡಬೇಕಾಗಿ ವಿನಂತಿ.
*****
ನಂತರ ೦೮೦-೪೨೬೬೨೨೩೧ ದೂರವಾಣಿಯಿಂದ ನನಗೆ ಕರೆಯೊಂದು ಬಂತು. ಕರೆ ಮಾಡಿದಾತ "ನನ್ನ ಹೆಸರು ವಿಜಯ್, ಬಜಾಜ್ ಬೆಂಗಳೂರು ಅಫೀಸ್ ನಿಂದ ಕರೆ ಮಾಡ್ತಿದ್ದೀನಿ" ಎಂದು ಪರಿಚಯಿಸಿಕೊಂಡು, ನನ್ನ ಮಿಂಚೆ ಕುರಿತು ಸಮಜಾಯಿಷಿ ಕೊಡಲು ಪ್ರಯತ್ನಿಸಿದರು. ಮಾತನಾಡುತ್ತ ವಿಜಯ್ ಹೇಳಿದ್ದು "ಕನ್ನಡದಲ್ಲಿ ಕೈಪಿಡಿ ಮಾಡಿಸಿಲ್ಲ, ಪೂರ್ತಿ ಭಾರತ! ಗಮನದಿಲ್ಲಿಟ್ಟುಕೊಂಡು ಎರಡು ಭಾಷೆಯಲ್ಲಿ ಕೈಪಿಡಿ ಮಾಡಿದ್ದೇವೆ......

ನಾನು "ನಮ್ಮ ಮನೆಯಲ್ಲಿ ಬಜಾಜ್ ಸಂಸ್ಥೆ ಇಸ್ತ್ರಿ ಪೆಟ್ಟಿಗೆಯ ಸುರಕ್ಷತೆ ಬಗ್ಗೆ ತಿಳಿದುಕೊಳ್ಳಲು ನಮಗೆ ಅವಶ್ಯವಿರುವ ಭಾಷೆ ಕನ್ನಡ" ಕನ್ನಡೇತರ ಭಾಷೆಯ ಕೈಪಿಡಿ ನಮಗೆ ಉಪಯೋಗವಿಲ್ಲ. ಇಡೀ ಭಾರತ! ಗಮನದಲ್ಲಿರಿಸಿ ನೀವು ಕೈಪಿಡಿ ತಯಾರಿಸಿರುವುದಾದರೆ ೨೦ಕ್ಕೂ ಹೆಚ್ಚಿನ ಭಾಷೆ ನಿಮ್ಮ ಕೈಪಿಡಿಯಲ್ಲಿ ಅಳವಡಿಸಬೇಕಿತ್ತು... ಹೀಗೆ ಕರ್ನಾಟಕದಲ್ಲಿ ಅವರ ವ್ಯವಹಾರದಲ್ಲಿ ಕನ್ನಡದ ಅವಶ್ಯಕತೆ ಏಕೀರಬೇಕು. ಅಂತೆಯೆ ತಮಿಳುನಾಡಿನಲ್ಲಿ ಬಜಾಜ್ ತಮಿಳನ್ನೇ ಏಕೆ ಉಪಯೋಗಿಸಬೇಕು ಎಂದು ಮನವರಿಕೆ ಮಾಡಿಸಲು ಪ್ರಯತ್ನಿಸಿದೆ! ಕೊನೆಗೆ ವಿಜಯ್, ಈ ಕುರಿತಾಗಿ ಬಜಾಜ್ ಮುಖ್ಯ ಕಚೇರಿಗೆ ತಿಳಿಸಿ ಕನ್ನಡದಲ್ಲಿ ಕೈಪಿಡಿ ಮಾಡಿಸಿ ಕೊಡುವಬಗ್ಗೆ ಭರವಸೆ ನೀಡಿದ್ದಾರೆ!

ವಿಜಯ್ ಕೊನೆಯದಾಗಿ ಒಂದು ಪ್ರಶ್ನೆ ನನ್ನನ್ನೇ ಕೇಳಿದರು. ಈ ರೀತಿ ವಸ್ತುಗಳನ್ನು ತಯಾರಿಸಿರುವವರು ಯಾರು ಕೈಪಿಡಿ ಕನ್ನಡದಲ್ಲಿ ಮಾಡಿಸಿದ್ದಾರೆ ಎಂದು? "ಯಾರು ಮಾಡಿಸಿದ್ದಾರೆ ಎಂಬ ಮಾಹಿತಿ ನನ್ನಲ್ಲಿಲ್ಲ, ಯಾರ್ಯಾರು ಮಾಡಿಸಿಲ್ಲ ಎಂದು ನನಗೆ ಕಂಡು ಬಂದಾಗ ಕನ್ನಡದಲ್ಲಿ ಮಾಡಿಸಿ ಎಂದು ನಾನು ಕೇಳುತ್ತೇನೆ. ನೀವು ಮಾಡಿಸಿಲ್ಲ ಈಗ ನೀವು ಮಾಡಿಕೊಡಿ ಎಂದೆ.

ಇದನ್ನೂ ಓದುತ್ತಿರುವವರೆಲ್ಲಾ ಇನ್ನು ಮುಂದೆ ತಾವು ಖರೀದಿಸುವ ಯಾವುದೇ ವಸ್ತು ಇರಲಿ (ಟಾಟಾ ಸ್ಕೈ, ಸಾಮ್ಸಂಗ್ ಟೀವಿ, ಓನಿಡಾ ಒಗೆಯೋ ಯಂತ್ರ, ಫಿಲಿಪ್ಸ್ ರೇಡಿಯೋ...............ಹೀಗೆ) ಕನ್ನಡದಲ್ಲಿ ಇದರ ಮಾಹಿತಿ, ವಿವರಣೆ, ಕೈಪಿಡಿ ವಿತರಿಸಿ ಎಂದು ಕೇಳಲೇ ಬೇಕಲ್ಲವೆ?

ಕೆಳಗಿನ ಚಿತ್ರ ನೋಡಿ.

ಯೂರೋಪ್ ನಲ್ಲಿ ತಯಾರಾದ ಜೀವ ಕವಚವೊಂದರ ಕುರಿತಾದ ವಿವರಣೆ. ಇಡೀ ಪ್ರಪಂಚಕ್ಕೆ ತಿಳಿಯತ್ತಲ್ಲ ಅಂತ ಅವರು ಒಂದು ಭಾಷೆಯಲ್ಲಿ ಅದರ ವಿವರಣೆ ನೀಡಿ ಸುಮ್ಮನಿರಬಹುದಿತ್ತು. ಆದರೆ ಜೀವದ ಬೆಲೆ ಅವರಿಗೆ ಏನೆಂದು ಗೊತ್ತು ಮತ್ತು ವಸ್ತುವಿನ ಬಳಕೆ ಸಮರ್ಪಕವಾಗಿ ಆಗಬೇಕೆಂಬ ಕಾಳಜಿ ಅವರಿಗಿದ್ದುದರಂದ ಅವರು ತಮ್ಮ ಉತ್ಪನ್ನ ವಿತರಿಸುವೆಡೆಯಲ್ಲಿ ಬಳಕೆಯಲ್ಲಿರುವ ಭಾಷೆಗಳಲ್ಲಿ ವಿವರಣೆ ನೀಡಿದ್ದಾರೆ.

ತಮ್ಮ ಉತ್ಪನ್ನಗಳ ಹೆಚ್ಚಿನ ಬಿಕರಿಗೆ ಇದೊಂದು ದಾರಿ ಸಹ ಅಂತ ಇವರು ತಿಳಿದುಕೊಂಡಿದ್ದಾರೆ. ನಮ್ಮ ಭಾರತದ ಸಂಸ್ಥೆಗಳು ಇಲ್ಲದ್ದನ್ನು ನಮ್ಮ ಮೇಲೆ ಹೇರಲು ಮುಂದಾಗಿದ್ದಾರೆ.

ಚಂದ್ರಶೇಖರನ್ ಕಲ್ಯಾಣ ರಾಮನ್,
ಹಳದಿ - ಕೆಂಪಿನ ಚಿಂತನೆ ಕಪ್ಪು ಬಿಳುಪಿನಲ್ಲಿ

***

ಇತರ ಭಾಷಿಕರಿಗೆ ದೀಪಾವಳಿ ಶುಭಾಶಯ, ಕನ್ನಡಿಗರಿಗೆ ಮಾತ್ರ "ದಿವಾಳಿ" ಯ ಶಾಪ!

*****
ಇವತ್ತಿನ 'ಟೈಮ್ಸ್ ಆಫ್ ಇಂಡಿಯಾ' ಪತ್ರಿಕೆ ಭಾರತೀಯರೆಲ್ಲರಿಗೂ ದೀಪಾವಳಿ ಶುಭಾಶಯ ತಿಳಿಸಿದೆ. ಲಗತ್ತಿಸಿರುವ ಚಿತ್ರ ಗಮನಿಸಿ.


ಲಕ್ಷ್ಮಿಯ ಬಲಗೈ ಯಿಂದ ಭಾರತೀಯ ಭಾಷೆಗಳಲ್ಲಿ ಶುಭಾಶಯದ ಹೊಳೆ ಹರಿದಿದೆ. ತಮಿಳಿನಲ್ಲಿ ದೀಪಾವಳಿ ವಾಳ್ತುಕ್ಕಳ್, ತೆಲುಗಿನಲ್ಲಿ ಹ್ಯಾಪಿ ದೀಪಾವಳಿ, ಗುಜರಾತಿ, ಬಂಗಾಳಿ, ಹಿಂದಿ ಹೀಗೆ ಇನ್ನಿತರ ಭಾಷೆಗಳಲ್ಲಿ ಶುಭ ದೀಪಾವಳಿ ಎಂದು ಶುಭಾಶಯ ತಿಳಿಸುತ್ತಿದೆ.

ಕನ್ನಡಿಗರಿಗೆ ಕೊಟ್ಟಿರುವ ಶಾಪ ಏನು ಗೊತ್ತ! ಲಕ್ಷ್ಮಿಯ ಎಡಕ್ಕಿರುವ ಆನೆ ಸೊಂಡಿಲ ಪಕ್ಕ ನೋಡಿ. "ಹಾ ಪಿ ದಿವಾಳಿ".
ಹ್ಯಾಪಿಗೇನೋ ಅರ್ಥ ಗೊತ್ತಿರುವುದೆ (ಆ 'ಹ್ಯಾಪಿ' ನೂ ಸಹ ಇವರು ಸರಿಯಾಗಿ ನಮೂದಿಸಿಲ್ಲ. 'ಹಾ' ಕೆಳಗಿನ 'ಯ' ಕಾರ ಎಗರಿ ಹೋಗಿದೆ).

"ದಿವಾಳಿ" ಅಂದ್ರೆ ಏನು ಅಂತ ನಿಮಗೆ ಗೊತ್ತಿರಬಹುದು! ಒಮ್ಮೆ ಪದಕೋಶದ ಪುಟ ಸಹ ನೋಡಿ.


ಈ ಜಾಹೀರಾತಿನಿಂದ ಸಾಬೀತಾಗುತ್ತದೆ. "ದೀಪಾವಳಿ" ನ "ದೀಪಾವಳಿ" ಅಂತಾನೆ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿ ಹೇಳೋದು ಅಂತ. ಕನ್ನಡದಲ್ಲೂ ನಾವು "ದೀಪಾವಳಿ" ಅಂತಾನೆ ಹೇಳ್ತಿದ್ದಿದ್ದು. ಈ "ದಿವಾಳಿ" ಹಾವಳಿ ಕನ್ನಡಿಗರ ಮೇಲೆ ಹೇಗೆ ಯಾವಾಗ ಎಲ್ಲಿಂದ ಶುರು ಆಯ್ತು ಅನ್ನುವುದೆ ಪ್ರಶ್ನೆ?

ರಾಜ್ಯಾದ್ಯಂತ ನೆರೆ ಉಂಟಾಗಿ ಬೀದಿಗೆ ಬಿದ್ದಿರುವ ಕನ್ನಡಿಗರಿಗೆ ಈ ರೀತಿಯಾಗಿ "ದಿವಾಳಿ" ಪಟ್ಟ ಕಟ್ಟುತ್ತಿದ್ದಾರೆಯೆ?
ಖಂಡಿತಾ ನಾವು ದಿವಾಳಿಯಾಗುವುದು ಬೇಡ. ದೀಪವನ್ನು ಬೆಳಗಿಸಿ ದೀಪಾವಳಿ ಆಚರಿಸೋಣ. ಸಮಸ್ತ ಕನ್ನಡಿಗರ ಬಾಳಿನಲ್ಲಿ ಈ ದೀಪಾವಳಿ ಹೊಸ ಬೆಳಕನ್ನು ಮೂಡಿಸುವಂತಾಗಲಿ...
**
ಚಂದ್ರಶೇಖರನ್ ಕಲ್ಯಾಣ ರಾಮನ್
*****

ದಿವಾಳಿಯಾಗು ಅನ್ನಿಸಿಕೊಳ್ಳಬೇಡಿ! "ದೀಪಾವಳಿಗೆ ಶುಭಾಶಯ" ತಿಳಿಸಲು ಹೇಳಿ......

*****
ಆಗಲೆ " ದಿವಾಳಿ " (DIVALI, DEEWALI, DEEVAALI) ಆಗೆಂದು ಒಂದೊಂದಾಗಿ ಹಾರೈಕೆಗಳು ಬರುತ್ತಿವೆ. ಟಿವಿಗಳಲ್ಲಿ, ಪತ್ರಿಕೆಗಳಲ್ಲಿ (ಕನ್ನಡದವು ಸೇರಿದಂತೆ) ಮಾರಾಟಗಾರರು ತಮ್ಮ ಅಂಗಡಿ, ಮಳಿಗೆಗಳಲ್ಲಿ ಬಂದು ವಸ್ತುಗಳನ್ನು ಕೊಂಡು 'ದಿವಾಳಿ'ಯಾಗಲು ಜಾಹೀರಾತು (ಈ ವರ್ಷದ ನಿಮ್ಮ "ದಿವಾಳಿ" ಆಚರಿಸಲು ನಮ್ಮ ಅಂಗಡಿಯಲ್ಲಿ ಸಾಮಾನು ಖರೀದಿಸಿ ಎನ್ನುತ್ತ) ಮೂಲಕ ಕರೆ ನೀಡುತ್ತಿದ್ದಾರೆ.

ಹೌದು ನಾವು ದೀಪ ಬೆಳಗಿಸಿ ನಮ್ಮೂರಲ್ಲಿ ಆಚರಿಸುವ ದೀಪಾವಳಿಯ ಹೆಸರು ನಿಧಾನವಾಗಿ ಬದಲಾಗುತ್ತಿದೆ. ಎಲ್ಲೆಡೆ ಅದು ದಿವಾಲಿ, ದಿವಾಳಿ ಯಾಗಿ ಭಿತ್ತರವಾಗುತ್ತಿದೆ. ಭಾರತದ ಇತರೆಡೆಗಳಲ್ಲಿ ಮುಖ್ಯವಾಗಿ ಉತ್ತರಭಾರತದಲ್ಲಿ ದೀಪಾವಳಿಗೆ ದಿವಾಲಿ ಎಂದು ಕರೆಯುವ ಪದ್ಧತಿ ಇರಬಹುದು! ಅಥವ ಅಲ್ಲಿಯೂ ದೀಪಾವಳಿ ಇದ್ದದ್ದು ದಿವಾಳಿ ಎಂದು ಬದಲಾಗಿದೆಯ? ಗೊತ್ತಿಲ್ಲ! ಇನ್ಯಾರೋ ಹಾಗೆ ಕರೆಯಲು ಹೊರಟಿದ್ದಾರೆ, ಅದು ಸರಿಯ? ತಪ್ಪ ? ಹಾಗೆ ಕರೆಯುತ್ತಿರುವ ಪದದ ಅರ್ಥ ಏನಾಗಿರಬಹುದು ಅಂತ ಯೋಚಿಚದೆ, ನಾವು ಸಹ ಇತರರಂತೆ ಹಾಗೆಯೆ ಶುಭಾಶಯ ವಿನಿಮಯ ಮಾಡಿಕೊಳ್ಳಲು ಮುಂದಾಗಿದ್ದೇವೆ.

ಇದರಂತೆಯೆ ನಮ್ಮ ಸಂಕ್ರಾಂತಿ ಸಹ. ಸಂಕ್ರಾಂತಿ ಅಂದ್ರೆ ಇವತ್ತು ಅನೇಕರು ಅದೇನೆಂದು ಕೇಳುವ ಪರಿಸ್ಥಿತಿ ಇದೆ. ಅದು ಪೊಂಗಲ್ ಆಗಿ ಹೆಚ್ಚಾಗಿ ಪ್ರಚಲಿತವಾಗುತ್ತಿದೆ. ನಮ್ಮ 'ದಸರಾ' ಸಹ 'ದುಶಿರಾ' ಅಂತ ಕಣ್ಣ ಮುಂದೆಯೇ ಬದಲಾವಣೆ ಆಗುತ್ತಿದೆ. ನಿಧಾನವಾಗಿ-ಒಂದೊಂದಾಗಿ ನಮ್ಮ ತನವನ್ನು, ನಮ್ಮ ಆಚರಣೆಯನ್ನು ಇತರರಿಗೆ ಬಿಟ್ಟುಕೊಟ್ಟು , ತಾನೂ ಅವರ ಜತೆ ಸೇರಿ ಕುಣಿದು-ತಿಪ್ಪರಲಾಗ ಹಾಕಿ ಶ್ರೀಮಂತವಾದ ನಮ್ಮ ಸಂಸ್ಕೃತಿಯನ್ನು ನಾವೆ ಬರಿದು ಮಾಡಿಕೊಂಡು ಮೂಲೆಗುಂಪಾಗುತ್ತಿದ್ದೇವೆ ಅನ್ನಿಸುತ್ತಿಲ್ಲವೆ? ಈ ಅನಿಸಿಕೆಯನ್ನು ಸಮರ್ಥಿಸುವವರಿಗಿಂತ ಯಾಕಪ್ಪ ಹೀಗೆ ಸಂಕುಚಿತವಾಗಿ ಬರೆದಿದ್ದೀಯ ಅಂತ ಹೇಳುವವರೆ ಬಹುಷ: ಹೆಚ್ಚಾಗಿ ಪ್ರತಿಕ್ರಿಯಿಸಬಹುದೇನೊ. ನಾವು ಎಲ್ಲರಲ್ಲೂ-ಎಲ್ಲದರಲ್ಲೂ ಬೆರೆತು (ನಮ್ಮದು ಮಾತ್ರ ಪಕ್ಕಕ್ಕಿಟ್ಟು) ಭಾವಕ್ಯತೆ ಪ್ರದರ್ಶಿಸುವುದರಲ್ಲಿ ಮೊದಲಿಗರಲ್ಲವೇ?

ಕಳೆದ ೨೭ ವರ್ಷಗಳಿಂದ ಬೆಂಗಳೂರಿನ ಅಚ್ಚ ಕನ್ನಡಿಗರೆ ಹೆಚ್ಚಾಗಿ ನೆಲಸಿರುವ ಪ್ರದೇಶವೊಂದರಲ್ಲಿ ನಮ್ಮನೆಯಿರೋದು. ನಾನು ಅಲ್ಲಿ ನಿರಂತರವಾಗಿ ನೆಲಸಿರದಿದ್ದರೂ ಅಲ್ಲಿನ ಆಗುಹೋಗುಗಳನ್ನು ಗಮನಿಸಿದ್ದೇನೆ - ಕಿವಿಗೊಟ್ಟಿದ್ದೇನೆ. ಇಷ್ಟು ವರ್ಷಗಳಲ್ಲಿ ಇಲ್ಲಿನ ಅಕ್ಕ-ಪಕ್ಕ , ಸುತ್ತ -ಮುತ್ತ ಒಂದು ಹನುಮಂತನ, ಒಂದು ಗಣೇಷ ಅಥವ ಒಂದು ಅಣ್ಣಮ್ಮ ದೇವಸ್ಥಾನ ಪ್ರಾರಂಭವಾದದ್ದು ನನ್ನ ಕಣ್ಣಿಗೆ ಬಿದ್ದಿಲ್ಲ. ಎಲ್ಲರಿಗೂ ಎದ್ದು ಕಾಣುವಂತೆ ಇಲ್ಲಿ ಮೊದಲಿಗೆ ಹುಟ್ಟುಕೊಂಡಿದ್ದು ಅಯ್ಯಪ್ಪ ದೇವಸ್ಥಾನ, ನಂತರ ಪಕ್ಕದಲ್ಲಿ ಓಂ ಶಕ್ತಿ ದೇವಸ್ಥಾನ. ನಾನು ಕಂಡ ಹಾಗೆ ನಮ್ಮ ಬಡಾವಣೆಯಲ್ಲಿ ದಸರ ಸಮಯದಲ್ಲಿ ಮನೆಗಳಲ್ಲಿ ಗೊಂಬೆಗಳನ್ನು ಇಟ್ಟು ಹಬ್ಬ ಆಚರಿಸಿಕೊಳ್ಳುವುದು ಇವರೆಗೂ ನಡೆದು ಬಂದಿರುವ ಪದ್ಧತಿ. ಆದರೆ ಈ ವರ್ಷ ಹೊಸ ಪಿಡುಗೊಂದು ಈ ಪ್ರದೇಶದಲ್ಲಿ ಹೆಡೆಯೊಡೆದಿತ್ತು.



ಗರ್ಬಾ (ಗರ್ಭ=ಬಸುರಿ ಅಲ್ಲ) / ಧಾಂಡಿಯ ಎಂಬ ಅರ್ಥವಿಲ್ಲದ ನೃತ್ಯ ದಸರಾದ ಮೊದಲ ದಿನ ಪ್ರಾರಂಭವಾಗಿ ಮುಗಿದದ್ದು ವಿಜಯದಶಮಿಯ ಹಿಂದಿನ ದಿನ. ಇದನ್ನು ಆಯೋಜಿಸಿದ್ದವರಿಗೆ ಕನ್ನಡಿಗರ ಸಹಯೋಗವೂ ಇತ್ತು ಎಂದು ಹೇಳಲೇಬೇಕಾಗಿಲ್ಲ! ಬಹುಷ: ಒಮ್ಮೆಯಾದರೂ ಈ ಪರಿ ಖರ್ಚು ಮಾಡಿ ಇವರು ಇಲ್ಲಿ ನಮ್ಮ ರಾಜ್ಯೋತ್ಸವ ಆಚರಿಸಿದ್ದು ನೆನಪಿಲ್ಲ. ರಾತ್ರಿ ೮ ಘಂಟೆಗೆ ಶುರುವಾಗುತ್ತಿದ್ದ ಇದು ಮುಗಿಯುತ್ತಿದ್ದುದು ರಾತ್ರಿ ೧೨ ರ ನಂತರವೇ. ರಾತ್ರಿ ೮ -೯ ರ ಒಳಗೆ ನಿರ್ಜನವಾಗುವ, ಸರಿಸುಮಾರು ಅದೆ ಸಮಯಕ್ಕೆ ನಿದ್ರೆಗೆ ಜಾರುತ್ತಿದ್ದ, ಬಹುತೇಕ ಹಿರಿಯ ನಾಗರೀಕರೆ ವಾಸಿಸುವ ಸುತ್ತಮುತ್ತಲಿನ ಈ ಪ್ರದೇಶದಲ್ಲಿ ಆ ದಿನಗಳಲ್ಲಿ ಕರ್ಕಷವಾದ ಧ್ವನಿಯೊಂದು ಎಡಬಿಡದೆ ಹಿಂದಿ ಹಾಡುಗಳನ್ನು ಒರಲುತ್ತಿತ್ತು. ಆ ಧ್ವನಿ ಮೈಕಾಸುರನ ಸಹಾಯದಿಂದ ೧೦೦ ಪಟ್ಟು ದ್ವಿಗುಣಗೊಂಡು, ಆರ್ಭಟ ತಡೆಯಲಾಗದೆ ಇಡೀ ಬಡಾವಣೆಯೇ ಬೆಚ್ಚಿ ಬಿದ್ದಿತ್ತು. ವಿಚಾರಿಸಿದಾಗ ತಿಳಿದು ಬಂದದ್ದು ಇವರು ನಡೆಸುತ್ತಿರುವುದು ಗರ್ಭಾ ಅಥವ ದಾಂಡಿಯ ಎಂಬ "ಗುಜರಾತಿಗಳ ಹಬ್ಬ"

ಗರ್ಬಾ ಅಥವ ದಾಂಡಿಯ ದಸರಾ ಸಮಯದಲ್ಲಿ ಗುಜರಾತಿಗಳು (ನಾವು ಮನೆಯಲ್ಲಿ ಗೊಂಬೆ ಪ್ರದರ್ಶನ ಮಾಡುವಂತೆ) ಪ್ರತಿ ರಾತ್ರಿ ತಮ್ಮ ತಮ್ಮ ಬಡಾವಣೆಗಳಲ್ಲಿ ಆಚರಿಸುವ ಒಂದು ನೃತ್ಯದ ಸ್ನೇಹಕೂಟ. ಆ ಸಮಯದಲ್ಲಿ ಅವರ ಮನೆಗಳಲ್ಲಿ ಮಕ್ಕಳು-ದೊಡ್ಡವರು-ಅಜ್ಜ-ಅಜ್ಜಿಯರಾದಿಯಾಗಿ ಎಲ್ಲರೂ ಇದರಲ್ಲಿ ಭಾಗವಹಿಸುತ್ತಿದ್ದರು. ಅಲ್ಲಿ ಅದು ಯಾರಿಗೂ ಕಿರಿಕಿರಿ ಮಾಡುವುದಿಲ್ಲ. ಏಕೆಂದ್ರೆ ಅಲ್ಲಿ ಎಲ್ಲರೂ ಭಾಗವಹಿಸುತ್ತಾರೆ. ಬೆಳಿಗ್ಗೆ ತಮ್ಮ ಕೆಲಸಗಳನ್ನು ಮುಗಿಸಿ, ರಾತ್ರಿ ಊಟ ಮುಗಿಸಿ, ಸಾಮೂಹಿಕವಾಗಿ ಆಚರಿಸಿಕೊಳ್ಳುತ್ತಾರೆ. ಅದು ಅವರ ಸಂಪ್ರದಾಯ ಅವರು ಅಲ್ಲಿ ಆಚರಿಸಿಕೊಳ್ಳಲಿ ನಮ್ಮ ಅಭ್ಯಂತರವಿಲ್ಲ. ಅದನ್ನು ಇಲ್ಲಿ ಕೇವಲ ಒಬ್ಬಿಬ್ಬರ ಶೋಕಿಗಾಗಿ ಬಡಾವಣೆ-ಬಡಾವಣೆಗೆ ಚಿತ್ರಹಿಂಸೆ ನೀಡಿ ನಿದ್ರೆಗೆಡಿಸಿದ್ದು ಯಾಕೆ ಎಂಬುದೇ ಪ್ರಶ್ನೆ.

ಹೋಗಿ ವಿಚಾರಿಸಿದಾಗ ಯಾರೂ ಕೇಳಿಸಿಕೊಳ್ಳುವ ಪರಿಸ್ಥಿತಿಯಲ್ಲಿರಲಿಲ್ಲ? ಎಲ್ಲರೂ ದೇವಿ 'ತೀರ್ಥ' ವನ್ನು ಸೇವಿಸಿ ಪಾವನವಾಗಿದ್ದರು. ಹಾಡುಗಾರ "ಛೋಲಿ ಕೆ ಪೀಚೆ ಕ್ಯಾ ಹೈ" ಅಂತ ವಿಚಾರಿಸ್ತಿದ್ದ. "ಮೈ ಹೂ ಡಾನ್ ಮೈ ಹೂ ಡಾನ್", "ಮೆ ಕಲನಾಯಕ್ ಹೂ" ಅಂತ ಹೂಂಕರಿಸುತ್ತಿದ್ದ. ಕೊನೆಗೂ ಅದೆಲ್ಲಿದ್ದರೋ! ಪೋಲಿಸಣ್ಣರು ಬಂದ ಮೇಲೆಯೇ (ಯಾರೋ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು) ಇವರ ಆಟಕ್ಕೆ ಕಡಿವಾಣ ಬಿದ್ದದ್ದು. ಈ ಸಲದ ವ್ಯವಹಾರ ಮುಗಿಸಿ ಹೋಗುವ ಮುನ್ನ ಮತ್ತೆ ಮುಂದಿನ ವರ್ಷ ಬರ್ತೀವಿ ಅಂತ ಸಹ ಅವರು ಕಿರುಚಿ ಹೋಗಿದ್ದಾರೆ. ಇಲ್ಲಿಗೆ ಬಂದು ಗಮನಿಸಿ-ಭಾಗವಹಿಸಿ ಹೋದ ಸಾಂಸ್ಕೃತಿಕ ಸಹೃದಯರು! 'ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಅನ್ನುವಂತೆ' ಇಂತಹ 'ಸಾಂಸ್ಕೃತಿಕ' ಹಾವಳಿಗಳನ್ನು ನಿಧಾನವಾಗಿ ಬೆಂಗಳೂರಿನಲ್ಲೆಲ್ಲಾ ಹರಡಿಸುವುದರಲ್ಲಿ ಸಂದೇಹವೇ ಇಲ್ಲ.

ಮತ್ತೊಮ್ಮೆ ಇದು ಮರುಕಳಿಸಲು ವರ್ಷದ ಸಮಯವಿದೆ. ಹೇಗೆ ನಿಯಂತ್ರಿಸಬಹುದು ಯೋಚಿಸಲು ಸಮಯವಿದೆ. ಆದರೆ ದೀಪಾವಳಿ ಮಾತ್ರ ಇನ್ನೇನು ಹತ್ತಿರದಲ್ಲೆ ಇದೆ. ಯಾರಿಗೂ 'ದಿವಾಳಿ' ಯಾಗುವ ಶುಭಾಶಯ! ತಿಳಿಸದಿರೋಣ. "ದೀಪ ಬೆಳಗಿಸಿ ದೀಪಾವಳಿ ಆಚರಿಸಿ" ಎಂದು ಹೇಳೋಣವೆ?

ಚಂದ್ರಶೇಖರನ್ ಕಲ್ಯಾಣ ರಾಮನ್
ಹಳದಿ-ಕೆಂಪಿನ ಚಿಂತನೆ ಕಪ್ಪು-ಬಿಳುಪಿನಲ್ಲಿ!

*****

ಮಹಾರಾಷ್ಟ್ರದಲ್ಲಿ ಮರಾಠತೆಗೆ ಪ್ರಾಧಾನ್ಯತೆ ದೊರಕಿಸುವುದೇ ನಮ್ಮ ಆಧ್ಯತೆ......

****
ಬರುವ ಅಕ್ಟೋಬರ್ ೧೩ ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆಗೆ ಉಮೇದುವಾರರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನೆನ್ನೆಗೆ ಮುಗಿದಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಪ್ರಬಲವಾಗಿ ಬೇರೂರುವ ಲಕ್ಷಣ ತೋರುತ್ತಿರುವ ಪಕ್ಷವೊಂದನ್ನು ಹೊರತು ಪಡಿಸಿ! ಮಿಕ್ಕೆಲ್ಲಾ ಪಕ್ಷಗಳು, ಅದರ ಮುಖಂಡರು, ಅವರ ಸ್ಪರ್ಧಿಗಳಿಂದ ಅಲ್ಲಿನ ಎಲ್ಲಾ ಮತದಾರರನ್ನು (ಸ್ಥಳೀಯ ಮರಾಠರು ಮತ್ತು ಮರಾಠೇತರ ವಲಸಿಗರ) ಯಾವುದೇ ರೀತಿಯಲ್ಲಾದರೂ ಒಲಿಸಿಕೊಂಡು, ಹೇಗಾದರೂ ಮಾಡಿ ತಮ್ಮ ಪಕ್ಷಕ್ಕೆ ಮತ ಪಡೆದುಕೊಂಡು ಅಧಿಕಾರಕ್ಕೆ ಬರುವ ಕಸರತ್ತು ನಡೆದಿದೆ.

ಹೌದು, ರಾಜ್ ಠಾಕ್ರೆಯ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಮ.ನ.ಸೇ.) ಮಿಕ್ಕೆಲ್ಲಾ ಪಕ್ಷಗಳಿಗಿಂತ ಭಿನ್ನವಾಗಿ ಕೇವಲ ಸ್ಥಳೀಯ ಮರಾಠಿಗರು ಮತ್ತು ಅವರ ಮತಗಳ ಮೇಲೆ ಮಾತ್ರ ವಿಶ್ವಾಸವಿರಿಸಿ ಚುನಾವಣ ಕಣಕ್ಕಿಳಿದಿದೆ. ಬಹಳ ದಿನಗಳ ನಂತರ ರಾಜ್ ಠಾಕ್ರೆ, ರಾಷ್ಟ್ರೀಯ! ಇಂಗ್ಲೀಷ್ ಟಿವಿ ವಾಹಿನಿಯೊಂದರ ಸಂದರ್ಶನದಲ್ಲಿ ಭಾಗ ೧ ಮತ್ತು ಭಾಗ ೨(ಸಂದರ್ಶಕ ಇಂಗ್ಲೀಷ್ ನಲ್ಲಿ ಕೇಳುತ್ತಿದ್ದ ಪ್ರಶ್ನೆಗಳಿಗೆ ಮರಾಠಿಯಲ್ಲೆ ಉತ್ತರಿಸುತ್ತ) ಮಾತನಾಡುತ್ತ ತಮ್ಮ ಪಕ್ಷ ಮತ್ತು ಅದರ ನಿಲವು ಹೇಗೆ ಸ್ಥಳೀಯತೆ ಮತ್ತು ಮರಾಠಿಗರ ಹಿತ ಚಿಂತನೆಗೆ ಮಾತ್ರ ಬದ್ಧವಾಗಿದೆಯೆಂಬುದನ್ನು ಖಡಾಖಂಡಿತವಾಗಿ ಸಮರ್ಥಿಸಿಕೊಂಡರು.

ಭಾಷಾವಾರು ಪ್ರಾಂತ್ಯವಾಗಿ ವಿಂಗಡನೆಯಾಗಿರುವ ಭಾರತದಲ್ಲಿ ಅನೇಕತೆಯಲ್ಲಿ ಏಕತೆ ಉಳಿಯಬೇಕಾದರೆ, ಭಾರತ ನಿಜವಾಗಿ ಸಬಲ-ಸದೃಡವಾಗಬೇಕಾದರೆ ಆಯಾ ಪ್ರಾಂತ್ಯಗಳು ಎಲ್ಲಾ ರೀತಿಯಲ್ಲಿ ಬಲಗೊಳ್ಳಬೇಕು. ಅಂತೆಯೇ ಮಹಾರಾಷ್ಟ್ರದಲ್ಲಿ ಸರ್ವ ರೀತಿಯಲ್ಲಿ ಮರಾಠತೆ ಸ್ಥಾಪಿತವಾಗಿ ಅದು ಮಹಾರಾಷ್ಟ್ರವಾಗಿ ಉಳಿಯುವುದೇ ನಿಜವಾದ ರಾಷ್ಟ್ರೀಯತೆ ಮತ್ತು ಭಾರತವೆಂಬ ಹಲವು ಸ್ವತಂತ್ರ್ಯ ಪ್ರಾಂತ್ಯಗಳನ್ನೊಳಗೊಂಡ ರಾಷ್ಟ್ರವನ್ನು ರಚಿಸಿರುವುದರಲ್ಲಿನ ಸಾರ್ಥಕತೆ ಹಾಗು ಆ ದೊಡ್ಡ ಶಕ್ತಿಯನ್ನು ಮತ್ತಷ್ಟು ಬಲ ಪಡಿಸುವ ಸಾಧನ ಎಂಬ ಸ್ಪಷ್ಟತೆ ಅವರ ಮಾತುಗಳಲ್ಲಿದೆ. ಅವರ ಮಾತುಗಳಲ್ಲಿ ಇತರರಂತೆ ಬೂಟಾಟಿಕೆಯ ರಾಷ್ಟ್ರೀಯತೆಯ ಪ್ರತಿಪಾದನೆಯಿಲ್ಲ. ಆ ರೀತಿ ಬೂಟಾಟಿಕೆ ಪ್ರತಿಪಾದನೆ ಮಾಡಿ ಓಟುಗಳನ್ನು ಪಡೆದು ಚುನಾವಣೆ ಗೆಲ್ಲುವ ಇರಾದೆ ಅವರ ಮಾತುಗಳಲ್ಲಿ ಕಾಣಸಿಗುವುದಿಲ್ಲ. ಮರಾಠಿ ಮತದ ಬಲ ಏನೆಂದು ಸಾಬೀತು ಮಾಡುವ ಛಲ ಅವರಿಂದ ಹೊರಹೊಮ್ಮಿರುವುದನ್ನು ಕಾಣಬಹುದಾಗಿದೆ.

ಒಂದು ರಾಜ್ಯದ-ಪ್ರದೇಶದ, ಆಗು-ಹೋಗುಗಳನ್ನು ನಿರ್ದರಿಸುವವರು ಅಲ್ಲಿಯ ಸ್ಥಳೀಯರಾಗಿರಬೇಕು, ಆದರೆ ಮಹಾರಾಷ್ಟ್ರ ರಾಜ್ಯ ಸರ್ಕಾರ ರಚಿಸಲು ಇಂದು ವಲಸಿಗರ ಮತಗಳು ನಿರ್ಣಾಯಕವಾಗುವ ಹಂತ ತಲುಪಿದೆ. ಕೆಲಸ, ವ್ಯಾಪಾರ ಮತ್ತೊಂದನ್ನು ಅರಸಿ ಬರುವ ವಲಸಿಗರು ಎಂದೆಂದಿಗೂ ವಲಸಿಗರಾಗೆ ಉಳಿಯುತ್ತಿರುವುದು ಸಮಸ್ಯೆ. ಪರಿಹಾರವಾಗಿ ಕೆಲಸ ಅರಸಿ ಮಹಾರಾಷ್ಟ್ರಕ್ಕೆ ಬರುವವರಿಗೆ ರಹದಾರಿ ಪತ್ರ ಕ್ರಮ ಅನುಸರಿಸುವುದರ ಅವಶ್ಯಕತೆಯ ಬಗ್ಗೆ ಸಹ ರಾಜ್ ಮಾತನಾಡಿದ್ದಾರೆ. ಭಾರತದಿಂದ ಮಹಾರಾಷ್ಟ್ರ ಪ್ರತ್ಯೇಕವಾಗಬೇಕೆಂಬ ವಾದ ನಮ್ಮದಲ್ಲ, ಮಹಾರಾಷ್ಟ್ರದಲ್ಲಿ ಮರಾಠಾತತೆಗೆ ಪ್ರಾಧಾನ್ಯತೆ ದೊರಕಿಸುವ, ಮರಾಠಿಗರ ಹಕ್ಕಿನ ಪರವಾದ ಹೋರಾಟ ನಮ್ಮದು ಎಂಬುದು ರಾಜ್ ಮಾತುಗಳಲ್ಲಿ ಕೇಳಿಬರುತ್ತದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಗಣನೀಯವಾಗಿ ಮ.ನ.ಸೇ.ಯನ್ನು ಬೆಂಬಲಿಸಿರುವುದು ಈ ಮರಾಠಿ ಮತಗಳೆ ಎಂದು ರಾಜ್ ವಿಶ್ವಾಸದಿಂದ ಸಮರ್ಥಿಸಿಕೊಳ್ಳುತ್ತ, ನಮ್ಮ "ಮಹಾರಾಷ್ಟ್ರದಲ್ಲಿ ಮರಾಠತೆ" ಯಲ್ಲಿ ನಂಬಿಕೆಯಿಟ್ಟವರು, ವಲಸಿಗರಾಗಿದ್ದವರು ನೈಜ ರಾಷ್ಟ್ರೀಯತೆಯೆಂದರೆನೆಂದು ಅರಿತವರು ನನ್ನ ಪಕ್ಷಕ್ಕೆ ಮತ ಹಾಕುತ್ತಾರೆ ಮತ್ತು ಇಂತಹ ಮತಗಳು ಮಾತ್ರ ನನಗೆ ಸಾಕು ಎಂಬ ಎಂಬ ಅವರ ಆತ್ಮ ವಿಶ್ವಾಸದಿಂದ ಕೂಡಿದ, ಕೇವಲ ಮರಾಠಿ ಬಲದ 'ನವ ಮಹಾರಾಷ್ತ್ರ' ವನ್ನು ಕಟ್ಟುವ ಗಟ್ಟಿತನವನ್ನು ಅವರ ಹೇಳಿಕೆಗಳಿಂದ ಅರಿಯಬಹುದಾಗಿದೆ.
*****
ನಮ್ಮ ಕರ್ನಾಟಕವನ್ನು ಸಹ ಇದುವರೆಗೆ ಆಳಿದವರು, ಈಗ ಆಧಿಕಾರದಲ್ಲಿರುವವರು ನಮ್ಮ ನಾಡಿನ ಹಿತಕಾಯುವ ಕಾಯಕವೇ ಇಲ್ಲಿ ಅಧಿಕಾರ ವಹಿಸಿಕೊಂಡು ಆಡಳಿತ ನಡೆಸುವವರ ಆಧ್ಯ ಕರ್ತವ್ಯ ಎಂದು ಮನಗಾಣದೆ, ಸುಭದ್ರ-ಸಮೃದ್ಧ ಕನ್ನಡ ನಾಡು ಕಟ್ಟುವೆಡೆ ಗಮನ ಹರಿಸದೆ, ಕೇಂದ್ರದದವರ ಅಡಿಯಾಳು, ಆಡಿಸಿಕೊಳ್ಳುವ ಗೊಂಬೆಗಳಾಗಿ, ಪೊಳ್ಳು ರಾಷ್ಟ್ರೀಯತೆಯ ಸೋಗಿನಲ್ಲಿ ಮುಳುಗಿ ಹೋಗಿ, ತಮ್ಮತನ ಮತ್ತು ಬದ್ಧತೆಯನ್ನು ಮರೆತು ಎಲ್ಲಾ ರೀತಿಯಲ್ಲೂ ಕನ್ನಡ-ಕನ್ನಡಿಗ-ಕರ್ನಾಟಕ ದ ಹಿತಚಿಂತನೆಯನ್ನು ನಿರ್ಲಕ್ಷಿಸಿರುವುದು ಕಂಡುಬರುತ್ತದೆ.

ಕನ್ನಡಿಗರಿಗಾಗಿ, ಕನ್ನಡಕ್ಕೋಸ್ಕರ, ಕನ್ನಡಿಗರದೇ ಆದ ಎಡ-ಬಲ-ಕೇಂದ್ರದ ಹಂಗಿಲ್ಲದ ಕೇವಲ ಕನ್ನಡತ್ವದ ಸಿದ್ದಾಂತ ಪ್ರತಿಪಾದಿಸುವ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇಂದು ಹೆಚ್ಚಾಗಿದೆ. ಸಧ್ಯಕ್ಕೆ ಕನ್ನಡದ ಎಲ್ಲಾ ಸಮಸ್ಯೆಗಳಿಗೆ ಹೆಗಲು ಕೊಟ್ಟು, ಎಲ್ಲೆಡೆ ಜನಾಂದೋಲನ ಮೂಡಿಸುವಲ್ಲಿ ಸಫಲರಾಗಿ, ಕನ್ನಡಿಗರ ಆಶಾಕಿರಣವಾಗಿ ಬೇರೂರುತ್ತಿರುವ ಕ.ರ.ವೇ. ಯಂತಹ ಸಂಘಟನೆಗಳು ಈ ನಾಡಿನ ದೊಡ್ಡ ರಾಜಕೀಯ ಶಕ್ತಿಯಾಗಿ ಬೆಳಗುವಲ್ಲಿ ಸಹ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳಬೇಕಿದೆ. ಕನ್ನಡ ನಾಡು-ನುಡಿ ಪರವಾದ ಪ್ರಾಮಾಣಿಕ ಯುವ ಸಂಘಟನೆಯನ್ನು ಬೆಂಬಲ ಕೊಟ್ಟು ಬೆಳೆಸುವತ್ತ ಇಡೀ ಕನ್ನಡ ಸಮುದಾಯ ಕಂಕಣ ತೊಡಬೇಕಿದೆ.

****
 
 

About

CHIKKABALLAPURA CHIKKABALLAPURA created this social network on Ning.

Create your own social network!

Events

Forum

CHIKKABALLAPURA

ekavi School adoption

Started by CHIKKABALLAPURA Jun 14.

CHIKKABALLAPURA

ekavi avtivities 2008

Started by CHIKKABALLAPURA Jun 14.

CHIKKABALLAPURA

ekavi activities 2009

Started by CHIKKABALLAPURA Jun 14.

CHIKKABALLAPURA

Kuvempu Janmashathamanothsava 12-12-2004 program

Started by CHIKKABALLAPURA Jun 14.

Groups

RSS

ಮತ್ತದೇ ಬೇಸರ, ಅದೇ ಹುರುಪು


"ಮಲೆಸೀಮೆಯಲ್ಲಿ ಈ ಪಾಟಿ ಬಿಸಿಲು ಕಂಡಿದ್ದೇ ಇಲ್ಲಾ ಭಟ್ಟರೇ, ಎಲ್ಲಿಗಾದ್ರೂ ಹೊಗುವ ಬಂದ್ರೆ ರಣಬಿಸಿಲು ನೆತ್ತಿ ಸುಡುತ್ತೆ ?" , ಮನೆ ಮುಂದಿನ ಚಿಟ್ಟೆಯಲ್ಲಿ ವಿರಮಿಸಿದ್ದ ಮೇಗಿನ ಗದ್ದೆ ರಾಮಣ್ಣ, ಅಣ್ಣ(ಅಪ್ಪಯ್ಯ)ನ ಜೊತೆ ಹರಟುತ್ತಿದ್ದ. ಅವನ ಮಾತಿಗೆ ಗೌಣುಹಾಕುತ್ತಾ ನನ್ನೆಡೆ ತಿರುಗಿದರು. ಅದು ರಾಮನಿಗೆ ಕಾಫಿ ಸಮಾರಾಧನೆ ಅಣಿ ಮಾಡು ಎನ್ನುವ ಸೂಚನೆ. ನಾನು ಒಳನಡೆದೆ. ಇಬ್ಬರೂ ಮಟ ಮಟ ಮಧ್ಯಾಹ್ನ ಕಾಫಿ ಹೀರಿ ಮತ್ತೆ ಮಾತಲ್ಲೆ ಊಟ ಮುಗಿಸಿದ್ದರು. ರಾಮಣ್ಣನಿಗೆ ಬೇಸಿಗೆಯಲ್ಲಿ ಸಾಮಾನ್ಯವಾಗಿ ಓಡಾಟ ಹೆಚ್ಚು, ಅದೂ ಯುಗಾದಿ ನಂತರ ಸುಮಾರು ಶುಭ ಸಮಾರಂಭಗಳಿಗೆ ಹೇಳಿಕೆ ನೀಡುವುದು. ಚಪ್ಪರ ಹಾಕುವುದು, ಮಂಟಪ ಮಾಡುವುದರಿಂದ ಹಿಡಿದು ಎಲ್ಲಾ ಕೆಲ್ಸಗಳಲ್ಲಿ ವ್ಯಸ್ತನಾಗಿರುತ್ತಿದ್ದ.

ಹೀಗೆ ಸದಾ ಚಟುವಟಿಕೆಯ ಜೀವಿ ರಾಮಣ್ಣನಿಗೂ ಬಿಸಿಲಿನ ಝಳ ಈ ಬಾರಿ ಚುರುಕು ಮುಟ್ಟಿಸಿದ್ದಂತೂ ನಿಜ. ಚಿಕ್ಕಂದಿನಿಂದ ಆತನನ್ನು ನಾವೆಲ್ಲಾ ರಾಮಣ್ಣ ಅಂತೆಲೆ ಕರೆಯೋದು. ಆದ್ರೆ ಆತನಿಗೆ ಏನಿಲ್ಲಾ ಅಂದ್ರೂ 45-50 ರ ಪ್ರಾಯ ಇರಬಹುದು ಅಥವಾ ಅದಕ್ಕಿಂತ ಹೆಚ್ಚಿರಬಹುದು. ಆದ್ರೆ ಆತನ ಚುರುಕುತನ ನಮ್ಮ ವಯಸ್ಸಿನವರಿಗೂ ಇಲ್ಲ. ಎಣ್ಣೆಗಂಪು ಬಣ್ಣದ ರಾಮಪ್ಪನ ಆಸ್ತಿ ಎಂದೂ ಮಾಸದ ಮುಗ್ಧ ನಗು. ಎರಡು ಕಿವಿಗೂ ಒಂಟಿ ಧರಿಸಿ, ಸದಾ ಅದೇ ಮಾಸಿದ ಬಿಳಿ ಅಂಗಿ ಮೊಳಕಾಲಿಗಿಂತ ಮೇಲೆ ಉಟ್ಟ ಕಚ್ಚೆ ಪಂಚೆ. ಕೈಲಿ ಎಂದಿನಂತೆ ಕರಿ ಬಣ್ಣದ ಛತ್ರಿ. ಹೊಗೆಸೊಪ್ಪು ಹೊಸೆಯುತ್ತಾ ಗೊಟಡಿಕೆ ಮೆಲ್ಲುತ್ತಾ ಶೃಂಗೇರಿ, ಮೂಡಿಗೆರೆ, ಕೊಪ್ಪ, ಬಾಳೆಹೊನ್ನೂರು, ಶಿವಮೊಗ್ಗ.... ಸೀಮೆಯ ವಕ್ತಾರನಂತೆ ಸದಾ ಓಡಾಡುವ ಇವನನ್ನು ನೋಡದವರೆ ವಿರಳ. ಸಹಕಾರ ಸಾರಿಗೆ, ನಿಸ್ಮಿತಾ, ಮಲ್ಲಿಕಾರ್ಜುನ, ಕೆಕೆಬಿ, ತುಂಗಭದ್ರಾ. ಅವಿಭಜಿತ ಶಂಕರ್ ಟ್ರಾನ್ಸ್ ಪೋರ್ಟ್ ಹೀಗೆ ಎಲ್ಲಾ ವಾಹನದಲ್ಲೂ ಡ್ರೈವರ್ ಪಕ್ಕದ ಬದಿ ಸೀಟು ಖಾಯಂ.

ಸಾಮಾನ್ಯವಾಗಿ ರಾಮಣ್ಣ ಬಸ್ ಸ್ಪಾಪ್ ಗಳಲ್ಲಿ ನಿಂತು, ಬಸ್ ಕಾಯ್ದು ಹತ್ತುತ್ತಿದ್ದದ್ದೆ ಕಮ್ಮಿ. ಮೊದಮೊದಲೆಲ್ಲಾ ಇವನು ಕೈ ಒಡ್ಡಿದ ಕಡೆಯೆಲ್ಲಾ ಬಸ್ ನಿಲ್ಲಿಸುತ್ತಿದ್ದ ಡ್ರೈವರ್ ಗಳು, ಬರಬರುತ್ತಾ ಇವನ ಕಡೆ ಉದಾಸೀನರಾಗುತ್ತಾ ಬಸ್ ಹಾಗೆ ಹೊಡೆದುಕೊಂಡು ಹೋಗತೊಡಗಿದರು. ಆದ್ರೆ ಇವ ಬಿಡಬೇಕಲ್ಲ. ತಿಂಗಳ ಕೆಳಗೆ ಜೈಪುರದಿಂದ ಮುಂದೆ ಕಲ್ಕೆರೆಗೂ ಮುನ್ನ ಸಾಮಾನ್ಯವಾಗಿ ಕೈ ಒಡ್ಡಿ ಬಸ್ ನಿಲ್ಲಿಸುತ್ತಿದ್ದ ರಾಮಣ್ಣ, ಮುಷ್ಟಿಯಲ್ಲಿ ಕಲ್ಲು ಹಿಡಿದು ಗಣ ಬಂದ ಹಾಗೆ ಆಡುತ್ತಾ ಬಸ್ ಗೆ ಅಡ್ಡವಾಗಿ ನಿಂತ್ತಿದ್ದನಂತೆ. ಡ್ರೈವರ್ ಬ್ರೇಕ್ ಒತ್ತಿದ್ದ ರಭಸಕ್ಕೆ ಹಲವರ ಮುಸುಡಿ, ಕಿವಿ ಮೂಗುಗಳು ಜಖಂ ಆಗಿದ್ದಂತೂ ಸತ್ಯ. ಆಮೇಲೆ ಏನೂ ಅರಿಯದವನಂತೆ ಮೆಲ್ಲಗೆ ಬಸ್ ಏರಿ ತನ್ನ ಸೀಟಿನಲ್ಲಿ ಕೂತ ರಾಮಣ್ಣನಿಗೆ ಕಂಡೆಕ್ಟರ್ ಬೈಗುಳ ಪುಷ್ಪವೃಷ್ಟಿಯಂತೆ ಅನಿಸಿ, ಎಂದಿನ ಪೆಕರು ನಗೆ ನಕ್ಕನಂತೆ. ಕಡೆಗೆ ಕಂಡೆಕ್ಟರ್ ಹಣೆ ಬಡಿದುಕೊಂಡು ಹೋದನಂತೆ. ಈ ಬಗ್ಗೆ ಅಣ್ಣ ಪ್ರಶ್ನಿಸಿ ಯಾಕೋ ರಾಮ ಹೀಗೆಲ್ಲಾ ಮಾಡಿದೆಯಂತೆ ಅಂದ್ರೆ, "ಅಯ್ಯೋ ಬಿಡಿ ಭಟ್ಟರೆ, ಹುಡುಗು ಮುಂಡೇವು. ಅವಕ್ಕೆನೂ ಗೊತ್ತು. ಅವರಪ್ಪನ ಕಾಲದಿಂದ ನಾನು ಬಸ್ ನಲ್ಲಿ ಓಡಾಡಿದ ಸರ್ವೀಸ್ ಇದೆ ನಂಗೆ. ಒಂಚೂರು ಮರ್ಯಾದೆ ಕೊಟ್ಟು ಅಭ್ಯಾಸ ಇಲ್ಲ ಈಗೀನಾ ಮುಂಡೆವಕ್ಕೆ" ಅನ್ನೋದೆ.

ರಾಮಣ್ಣನ್ನಂತವರು ನಮ್ಮ ಸೀಮೆಯಲ್ಲಿ ಹುಡುಕಿದರೆ ನೂರು ಮಂದಿ ಸಿಗುತ್ತಾರೆ. ಆದ್ರೆ ಇತ್ತೀಚೆಗೆ ರಾಮಣ್ಣನಂಥಹ ಟಿಪಿಕಲ್ ಮಲೆನಾಡಿನ ಜೀವಿಗಳ ಬಗ್ಗೆ ಒಂದಷ್ಟು ಹೆಚ್ಚಿನ ಆಸ್ಥೆ ಮೂಡಿತ್ತು. ಅದಕ್ಕೆ ಕಾರಣ ಇಷ್ಟೆ. ತೇಜಸ್ವಿ ಅವರ ಕಣ್ಮರೆಯ ವಿಷಾದ ರಾಗ, ಮತ್ತೆ ಇಂಥಹ ಜನ ನೋಡಿ ಮೂಡುವ ಹುರುಪು. ಕಾಲ ಎಲ್ಲವನ್ನೂ ಮರೆಸುತ್ತದೆ ಅನ್ನೋ ಮಾತನ್ನು ಕಾಲ ಎಲ್ಲವನ್ನು ಜೀವಂತ ಇರಿಸುತ್ತದೆ. ಹೀಗಲ್ಲಾದಿದ್ದರೆ ಹಾಗೆ ಎಂದು ತಿದ್ದುಕೊಳ್ಳೋದು ವಾಸಿ ಅನಿಸುತ್ತದೆ.

ತೇಜಸ್ವಿ ಮರೆತರೆ ನಮ್ಮನ್ನು ನಾವು ಮರೆತಂತೆ
ಅಕ್ಕಾ ಎಷ್ಟು ಚೆಂದಿತ್ತು ಗೊತ್ತಾ? ಮೇಷ್ಟ್ರು ಮೊದಲು ಹೇಳಿದಾಗ ನಾವು ಎಲ್ಲೋ ಇಲ್ಲಿ ಮನೆ ಹತ್ರಾ ಇರೋ ಕಾಡು ತರಾನೇ ಏನೋ ತೋರಿಸಿ ಕಳಿಸ್ತಾರೆ ಅಂತಾ ಮಾಡಿದ್ವಿ. ತೇಜಸ್ವಿ ಅಜ್ಜ ಓಡಾಡಿದ ಕಾಡಂತೆ ಕಣೆ. ಹೋಗ್ ನಿಂಗೆ ಪುಣ್ಯ ಇಲ್ಲ ಹೀಗೆ ಸಾಗಿತ್ತು ಪುಟ್ಟ ಪೋರಿಯ ಮಾತಿನ ಝರಿ..

ತೇಜಸ್ವಿ ಅವರ ನೆನಪಿನಲ್ಲಿ ಏ.5 ರಂದು ನಡೆದ ಚಾರಣ ಕಾರ್ಯಕ್ರಮಕ್ಕೆ ಹೋಗಿ ಬಂದ ಮೇಲೆ ವರ್ಷಿಣಿಯ ಸಂಭ್ರಮಕ್ಕೆ ಎಣೆಯಿಲ್ಲ. ಬರೀ ಮನೆ ಸುತ್ತಣ ಕಾಡಿನಲ್ಲಿ ನಮ್ಮ ಜೊತೆ ಅಲೆಯುತ್ತಾ ಇದ್ದ ಹುಡುಗಿಗೆ ಒಮ್ಮೇಲೆ ಹೊಸದಾದ ಸಿರಿ ಕಂಡ ಅನುಭವ. ಮೂಡಿಗೆರೆಯ ವಿಸ್ಮಯಾ ಟ್ರಸ್ಟ್ ನ ಚಾರಣ ಕಾರ್ಯಕ್ರಮಕ್ಕೆ ಗೆಳತಿಯರೊಡನೆ ನನ್ನ ಚಿಕ್ಕನ ಮಗಳು ೧೦ ವರ್ಷದ ವರ್ಷಿಣಿ ಅಲ್ಲಲ್ಲ ವಾಕ್ ವರ್ಷಿಣಿ(ಮಾತಿನ ಮಳೆಗೆರೆಯುವವಳು ಅಹಹ್ಹಹಹಾ) ಕೂಡ ಹೋಗಿದ್ದಳು. ಆರೋಗ್ಯ ಕೊಂಚ ಏರುಪೇರಾದ ಕಾರಣ ನೆಚ್ಚಿನ ಗುರು ತೇಜಸ್ವಿ ಅಲೆದಾಡಿದ ತಾಣಕ್ಕೆ ನಾನು ಹೋಗಲಾಗಲಿಲ್ಲ. ಆದರೆ, ವರ್ಷಿಣಿಯ ಮಾತು, ಸಂಭ್ರಮ ಆ ನೋವನ್ನು ಮರೆ ಮಾಡಿತು. ಅಲ್ಲಿ ಪುಟ್ಟ ಪೋರಿ ಪ್ರಕೃತಿಯ ಮಡಿಲಿನಲ್ಲಿ ವಿಜ್ಞಾನಿಗಳು, ಪರಿಸರವನ್ನು ತಿಳಿದವರು, ತೇಜಸ್ವಿ ಒಡನಾಡಿಗಳ ಜೊತೆ ಏನೆಲ್ಲಾ ಕಲಿತಿರಬಹುದು. ಚಾರಣ ಮಾಡಿ, ದಿನ ನೋಡೊ ಗಿಡ ಮರ ಆದ್ರೂ ವೈಜ್ಞಾನಿಕ ದೃಷ್ಟಿಯಿಂದ ಅವುಗಳ ಬಗ್ಗೆ ಇನ್ನಷ್ಟು ತಿಳಿದಾಗ ಆಗುವ ಸಂತೋಷ ವರ್ಣಿಸಲು ಬರುವುದಿಲ್ಲ.

ಯಾರೂ ಬೇಡ ತೇಜಸ್ವಿ ಅವರ ಜೀವಂತ ಪಾತ್ರ ಬಿರಿಯಾನಿ ಕರಿಯಪ್ಪನನ್ನು ನೋಡಿದರೆ ಸಾಕು ತೇಜಸ್ವಿ ಬರೆದ ಕಥೆಗಳು ನಮಗರಿವಿಲ್ಲದಂತೆ ಕಣ್ಮುಂದೆ ಬಂದು ನಿಲ್ಲುತ್ತದೆ. ತೇಜಸ್ವಿ ಅಗಲಿದ ನಂತರ ಅವರ ಬಗ್ಗೆ ಜನರಲ್ಲಿ ಮೂಡುತ್ತಿರುವ ಆಸಕ್ತಿ , ಆದರಗಳನ್ನು ಕಂಡರೆ ಖುಷಿಯಾಗುತ್ತದೆ. ಆದರೆ ಅದೇ ರೀತಿ ಒಂದಿಷ್ಟು ಭಯ ಕೂಡ ಆಗುತ್ತದೆ. ಯಾವ ನಿರ್ಜೀವ ಶಕ್ತಿಗೂ ನಿಲುಕದಂತಿದ್ದವರು ತೇಜಸ್ವಿ. ಆದರೆ ಎಲ್ಲಿ ನಮ್ಮ ಜನ ತೇಜಸ್ವಿ ಎಂಬ ಬ್ರಾಂಡ್ ನೇಮ್ ಇಟ್ಟುಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೋ ಎಂಬ ಅಳುಕು ಮನದ ಮೂಲೆಯಲ್ಲಿ ಕೊರೆಯುತ್ತಿದೆ. ಏನೇ ಆದರೂ ಪ್ರಕೃತಿಯಲ್ಲಿ ಸತ್ವವಿರುವುದಷ್ಟೇ ಉಳಿಯುವುದು. ಸರಳ ಜೀವಿಗೆ ಅಭಿಮಾನದ ಕಾಮನಬಿಲ್ಲು ಸುತ್ತಿ ಬೆಟ್ಟ ಮೇಲೆ ಕೂರಿಸಿ ಉತ್ಸವ ಮಾಡುವುದು ಅನಗತ್ಯ. ನಾವಂತೂ ನಿತ್ಯ ಕಾಯಕದಲ್ಲೇ ಮೂಡಿಗೆರೆ ಸಂತನನ್ನು ಕಾಣುತ್ತೇವೆ.
ಚಿತ್ರಗಳ ಕೃಪೆ: ದಟ್ಸ್ ಕನ್ನಡ

ನೆಲೆ


ಇರುಳು ಕಳೆದು ಕೋಟಿ ಚುಕ್ಕಿಗಳ ಬೆಳಕಿನಿಂದ
ಮನೆ ಮನ ಬೆಳಗಿರಲು,
ಒಂಟಿತಾರೆ ದಿನಕರನ ಸಾಂಗತ್ಯವೇಕೆ?

ಬರಡು ಭೂಮಿಗೆ ನೀರುಣಿಸಿ ಸಕಲ ಚರಾಚರಕ್ಕೆ
ಜೀವಜಲವಾಗಿಹ ತುಂಗೆ ಇರಲು,
ತನ್ನೊಡಲಲ್ಲಿ ನೂರು ತುಂಗೆಯಯರನ್ನುಳ್ಳ
ಕಡಲ ಹಂಬಲವೇಕೆ?

ಗೋಳಿಮರದಿ ಕೂತ ಪುಟ್ಟ ಮಡಿವಾಳ ಹಕ್ಕಿಯ
ಇನಿದನಿ ಇಂಪಾಗಿರೆ,
ದೂರದೂರಿನ ಕೋಗಿಲೆಯ ಸ್ವರ ಆಲಿಸುವಾಸೆಯೇಕೆ?

ಮೈಮನಕೆ ಮುದ ನೀಡುವ ಪ್ರೀತಿಯ ಗುಡಿಸಿರಲು
ಕಾಣದೂರ ಹಂಗಿನರಮನೆಯ ವೈಭೋಗವೇಕೆ?
ಒಡಲಾಳದಲ್ಲಿ ಆರದ ಜ್ಞಾನಜ್ವಾಲೆ ಆವರಿಸಲು
ಉಳಿದ ಕಾಮತೃಷೆಯೇಕೆ?

ಮಲೆನಾಡಿನ ಮಗಳಾಗೆ ನಾ ಇರುವೆ, ನನ್ನ ಅಳಿವು ಉಳಿವು
ಗೆಲುವು ಸೋಲು, ನೋವು ನಲಿವಿಗೆ
ಪಂಚಭೂತಗಳೇ ಸಾಕ್ಷಿಯಾಗಿರಲಿ
ಎಲ್ಲಕ್ಕೂ ಅವುಗಳ ನೆರವಿರಲಿ, ನನ್ನಿ ಪರಿಸರ ತೊರೆಯುವ ಮುನ್ನ
ನನ್ನ ಈ ಆಕೃತಿ ಪ್ರಕೃತಿಯೊಂದಿಗೆ ಲೀನವಾಗಿರಲಿ

ಅನಂತಾನಂತ ನಮನ


ರಾಜು ಸಾವಿನ ಸುದ್ದಿ ಸುಳ್ಳಾಗಲಿ ಎಂದು ತಾಯಿ ಶಾರದೆಯ ಫೋಟೊ ನೋಡುತ್ತಾ ಬಹುಶಃ ಶನಿವಾರ ನಾನು ಕರೆ ಮಾಡಿದಾಗ ಎಲ್ಲರ ಬಾಯಲ್ಲೂ ಬರುತ್ತಿದ್ದದ್ದು ಒಂದೇ ವಾಕ್ಯ. "ಛೇ ಸಾವು ಬರಬಾರದಿತ್ತು. ಇದು ಸಾಯುವ ವಯಸ್ಸಲ್ಲ". ಬೆಂಗಳೂರಿನ ಮಿತ್ರರು ರಾಜು ಸಾವಿನ ಬಗ್ಗೆ ಹೇಳುತ್ತಿದ್ದರೆ, ಇತ್ತ ಕಣ್ಣಾಲಿಗಳು ತುಂಬಿ ಬಂದಿತ್ತು.

ರಾಜು ಅನಂತ ಸ್ವಾಮಿ s/o ಮೈಸೂರು ಅನಂತಸ್ವಾಮಿ(ದೊರೈ) ನನ್ನ ಗೆಳೆಯನಲ್ಲ, ಬಂಧುವಲ್ಲ, ನೆಂಟನಲ್ಲ, ಕನಿಷ್ಠ ಆತನನ್ನು ನೋಡಿರುವುದು ಒಂದೆರಡು ಬಾರಿ ಅಷ್ಟೇ. ಆದರೆ ಅವನ ಹಾಡಂತೆ 'ನೀ ನನ್ ಹಟ್ಟಿಗೆ ಬೆಳಕಾಗಿದ್ದೆ ರಾಜು. . .' ನಿತ್ಯ ತಂದೆ ಮಕ್ಕಳ ಗಾನಸುಧೆ ತುಂಗೆಯಂತೆ ನಮ್ಮ ಮನೆ ಮನದಲ್ಲಿ ಹರಿಯುತ್ತಿತ್ತು. ಆತನ ಕಂಠಸಿರಿ ಆತನನ್ನು ನನ್ನ ಆಪ್ತೇಷ್ಟರ ಸಾಲಿಗೆ ಸೇರಿಸಿತ್ತು. ಅದೆಷ್ಟೋ ಬಾರಿ ಮನನೊಂದಾಗ ರಾಜು ದನಿ ಕೇಳಿ ಸ್ವಯಂ ಸಾಂತ್ವನ ಹೇಳಿಕೊಂಡಿದ್ದು ಇದೆ.

ರಾಜು ಸಾವಿಗೆ ಕುಡಿತ ಒಂದು ಕಾರಣ ಅಷ್ಟೇ. ಆದರೆ ಇದು ಸ್ವಯಂಕೃತವೋ, ಸಹವಾಸ ದೋಷವೊ, ದುರ್ವಿಧಿಯೋ ಒಟ್ಟಿನಲ್ಲಿ ಆತನ ಸಾವು ಇಡೀ ಸಂಗೀತ ಲೋಕದ ದುರಂತಗಳಲ್ಲಿ ಒಂದು. ನನ್ನಂತಹ ಸಾಧಾರಣ ಅಭಿಮಾನಿಗಳಿಂದ ಹಿಡಿದು, ಆತನಿಂದ ಸಂಗೀತದ ಓನಾಮ ಕಲಿತ ಎಲ್ಲರ ಪಾಲಿಗೆ ಗುರುವಾಗಿ, ಹಸನ್ಮುಖಿ ಗೆಳೆಯನಾಗಿ ರಾಜು ಸದಾ ಸ್ಮರಣೀಯ. ಇಂದಿಗೂ ನಮ್ಮಡೆಯಲ್ಲಿ ಅತ್ರಿ ಸಾವಿನ ಸೂತಕ ಕಳೆದಿಲ್ಲ. ಆಗಲೇ ರಾಜು ಅಗಲಿಕೆ ಆಘಾತಕಾರಿಯಾಗಿದೆ. ಅದರಲ್ಲೂ ರಾಜು ಅವರ ತಾಯಿ, ಅಜ್ಜಿ ಈ ಆಘಾತವನ್ನು ಹೇಗೆ ಸಹಿಸುತ್ತಿದ್ದಾರೆ ಎಂದು ನೆನೆದರೆ ದೇವರ ಮೇಲೆ ಮುನಿಸಾಗುತ್ತದೆ. ರಾಜು ಬೆಳೆಸಿದ ಶಿಷ್ಯಂದಿರಲ್ಲಿ ಆತನ ಪ್ರತಿಭೆಯನ್ನು ಕಾಣುವ ಪ್ರಯತ್ನ ಪಡಬಹುದಾದರೂ, ಅನಂತಸ್ವಾಮಿ, ರಾಜು ಪರಂಪರೆ ಪೂರ್ಣವಾಗಿ ಇತಿಹಾಸದ ಪುಟ ಸೇರಲಿದೆ ಎಂಬ ಅರಗದ ಸತ್ಯ ಸದಾ ಕಾಡುತ್ತಿರುತ್ತದೆ. ಸಾವೇ ನೀನೇಷ್ಟು ಘೋರ...ನಿನಗಿದೋ ನನ್ನ ಧಿಕ್ಕಾರ...

ಕೆಲವು ಹನಿಗಳು

ಕೆಲ ಎಸ್ಎಂಎಸ್ ಸಂದೇಶದ ಭಾಷಾಂತರ....

ಜೀವನವಾಗಿದೆ ಈಗ ಗಲೀಜಾದ ಕಾಗದ
ಉರಿಸಲಾರರು ಯಾರು ಇದನು ಯಾರು
ಬರೆಯಲಾರರು ಯಾರು ಇದರ ಮೇಲೆ
ಈ ರೀತಿಯ ಬದುಕು ನಂದಾಗಿದೆ
ಸತಾಯಿಸುವವರಿಲ್ಲ, ಓಲೈಸುವವರಿಲ್ಲ ನನ್ನ

********************
ಅರಿಯದಂತೆ ಆಗಿಹೋದ ನೀ ಮನಕೆ

ಮೇಘಗಳ ನಡುವಲ್ಲಿ ನಸುಳಿ ಬಂದ ಸೌದಾಮಿನಿ
ಕಣ್ಣಹನಿಗಳೆರಡು ಉದುರುವ ಅಂತರದಲ್ಲಿ
ಬೀಸಿದ ಪ್ರಾಣವಾಯುವಿನ ತೆರದಿ
ಸುಳಿ ಸುಳಿದಾಡಿ,ಮನಕೆ ಮುದ ನೀಡಿ ನಲಿದಾಡಿ
ಮತ್ತೆ ಮತ್ತೆ ನೆನಪ ರಾಶಿ ಹೊತ್ತು ತರುವ ತಂಗಾಳಿ ನೀ

ಅರಿಯದಂತೆ ಆಗಿಹೋದ ನೀ ಮನಕೆ

ಕಾಯುವುದು ತರವೇ ನಿನಗೆ ನಾನು,
ಎಂದಿನಂತೆ ಬಾರದೇ ಹೋಗುವೆ ನೀನು

ಅರಿಯದಂತೆ ಆಗಿಹೋದ ನೀ ಮನಕೆ
ಪ್ರಶ್ನಾತೀತವಾಗಿ ಉಳಿದೆ ನನಗೆ
*********
ನನ್ನ ಇನಿಯ ತೊರೆದನು ನನ್ನ ಕೆಲ ಕ್ಷಣ
ದೂರಾಗಿ ಸನಿಹವಾದ ಎಂದಿತು ಮನ
ಅವನ ನೆನೆಯದೇ ಇರದ ಕ್ಷಣವೂ ಕ್ಷಣವಲ್ಲ
ಹೃದಯದಿ ನೆಲೆಸಿಹ ಅವನು ನನಗೆ ಕ್ಷಣಿಕವಲ್ಲ

ಮಳೆ ನಿಂತು ಹೋದ ಮೇಲೆ ಹನಿ ಎರಡು ಉದುರಿದೆ

Dr.Rajtejaswi
ಮೋಜಿನ ಮಳೆ ನಿಂತು ಆಗಲೇ ನಾಲ್ಕೈದು ದಿನವಾಯ್ತು. ಆದರೆ ಈ ವಾರ ಅಂತಹ ಸಂಭ್ರಮವಿಲ್ಲ. ಮಧ್ಯದಲ್ಲಿ ಯುಗಾದಿ ಹಬ್ಬ , ಹೋಳಿಗೆ ಊಟ ಮೆದ್ದಿದ್ದು ಬಿಟ್ಟರೆ. ಬಾಕಿಯಂತೆ ಏ.೫ ರಿಂದ ಏ ೧೨ ರ ವರೆಗೂ ಮನಸ್ಸಿಗೆ ಇಬ್ಬರನ್ನು ನೆನೆಯದೇ ಇರಲು ಸಾಧ್ಯವಾಗುವುದಿಲ್ಲ. ನೆಚ್ಚಿನ ಗುರು, ಮಾರ್ಗದರ್ಶಿ ತೇಜಸ್ವಿ , ನಾಡಿನ ಸಾಂಸ್ಕೃತಿಕ ಸಂಕೇತ ಡಾ. ರಾಜ್ ಕುಮಾರ್.


ತೇಜಸ್ವಿ ನಿರುತ್ತರದಲ್ಲಿ ಕವಿದ ಮೋಡ ಚದುರಿ ಮಳೆ ಸುರಿಸಿ, ಹರುಷವನ್ನು ಅರಿಸಿ ಸಾಗುತ್ತಿದೆ. ರಾಜ್ ನೆನಪಿನಲ್ಲಿ ಸ್ಮಾರಕ ಎಂಬ ನೆಪದಲ್ಲಿ ರಾಜ್ ಅವರ ಕನಸುಗಳು ಕಮರುತ್ತಿದೆ. ಈ ಇಬ್ಬರು ಸರಳ ಜೀವಿಗಳು ಇಂದಿನವರ ಜಂಜಾಟವನ್ನು ನೋಡುತ್ತಿದ್ದರೆ ಖಂಡಿತಾ ಖಾರವಾಗಿ ಪ್ರತಿಕ್ರಿಯಿಸುತ್ತಿದ್ದರು ಎನಿಸುತ್ತದೆ. ಸ್ಮಾರಕ ನಿರ್ಮಾಣ, ಅರ್ಥವಿಲ್ಲದ ಆಚರಣೆಗೆ ತೇಜಸ್ವಿಯಂತೂ ವಿರೋಧಿಸುತ್ತಿದ್ದರು. ರಾಜ್ ಅವರು ಜೀವನದುದ್ದಕ್ಕೂ ಸರಳತೆಯನ್ನು ಮೈಗೂಡಿಕೊಂಡು ಬೆಳೆದವರು. ನಗರದಲ್ಲಿದ್ದರೂ ಸದಾ ಹಳ್ಳಿಮನೆಯ ವಾಸ್ತವ್ಯಕ್ಕಾಗಿ ಹಾತೊರೆಯುತ್ತಿದ್ದ ಜೀವ. ತೇಜಸ್ವಿ ನಿಸರ್ಗದ ರಮಣೀಯತೆಗೆ ಸೋತು, ಪ್ರಕೃತಿಯ ಮಡಿಲಲ್ಲಿ ಸಾಧನೆ, ಸಂಶೋಧನೆ ಮಾಡುತ್ತಾ, ಮುಗ್ಧ ಜನರೊಡನೆ ಬೆರೆತು ಸಾರ್ಥಕ ಬದುಕು ಬಾಳಿದವರು. ಈ ಎರಡು ಚೇತನಗಳಲ್ಲಿ ನಾನು ಇಷ್ಟಪಡುವುದು ಸರಳತೆ ಹಾಗೂ ಜೀವನ ಪ್ರೀತಿ, ಉತ್ಸಾಹ. ಇವರಿಬ್ಬರ ಚಿಂತನೆಗಳು ಸ್ಮಾರಕಕ್ಕೆ ಸೀಮಿತವಾಗದೇ ಅವರ ಸಾಧನೆ, ಜೀವನ ಪ್ರೀತಿ ಎಲ್ಲರಲ್ಲೂ ಆಸುಹೊಕ್ಕದರೆ ಎಷ್ಟು ಸುಂದರ. ಅದ್ಭುತ ಮಾಯಾಲೋಕದ ಕನಸು ಕಣ್ಮುಂದೆ ಕಾಣಿಸುತ್ತಿದೆ. ವಿರಮಿಸುತ್ತೇನೆ ಸದ್ಯಕ್ಕೆ.

Badge

Loading…
 

© 2009   Created by CHIKKABALLAPURA on Ning.   Create Your Own Social Network

Badges  |  Report an Issue  |  Privacy  |  Terms of Service